Ad imageAd image

ತೀವ್ರ ಹೃದಯಾಘಾತದಿಂದ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿಜಿ ನಿಧನ 

Bharath Vaibhav
ತೀವ್ರ ಹೃದಯಾಘಾತದಿಂದ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿಜಿ ನಿಧನ 
WhatsApp Group Join Now
Telegram Group Join Now

ಕಲಬುರಗಿ: ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿಗಳು (35) ತೀವ್ರ ಹೃದಯಾಘಾತದಿಂದ ಇಂದು ವಿಧಿವಶರಾಗಿದ್ದಾರೆ. ಕಲಬುರಗಿ ಜಿಲ್ಲೆ ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿ ಈ ವಿರಕ್ತ ಮಠವಿದ್ದು, ನಸುಕಿನ ಜಾವ ತೀವ್ರ ಹೃದಯಾಘಾತದಿಂದ ಶ್ರೀ ಸಿದ್ದರಾಮ ಮಹಾಸ್ವಾಮಿಗಳು ಲಿಂಗೈಕ್ಯರಾಗಿದ್ದಾರೆ.

ನಿನ್ನೆ ರಟಕಲ್ ಗ್ರಾಮದಲ್ಲಿ ನಡೆದಿದ್ದ ಅದ್ಧೂರಿ ವಚನ ಸಂಗಮ ಕಾರ್ಯಕ್ರಮದಲ್ಲಿ ಶ್ರೀಗಳು ಭಾಗಿಯಾಗಿದ್ದರು. ವಚನ ಸಂಗಮ ಕಾರ್ಯಕ್ರಮದಲ್ಲಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್, ಶಾಸಕ ಬಿ.ಆರ್ ಪಾಟೀಲ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು. ಇಂದು ಸಂಜೆ 5 ಗಂಟೆಗೆ ರಟಕಲ್ ಗ್ರಾಮದಲ್ಲಿ ಧಾರ್ಮಿಕ ವಿಧಿ ವಿಧಾನದ ಪ್ರಕಾರ ಶ್ರೀಗಳ ಅಂತ್ಯಕ್ರಿಯೆ ನಡೆಯಲಿದೆ.

 

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!