Ad imageAd image

ತಡರಾತ್ರಿ ಹೃದಯಾಘಾತದಿಂದ ಶ್ರೀನಿವಾಸ ಪ್ರಸಾದ್ ನಿಧನ

Bharath Vaibhav
WhatsApp Group Join Now
Telegram Group Join Now

ಬೆಂಗಳೂರು: ತಡರಾತ್ರಿ ಹೃದಯಾಘಾತದಿಂದ ನಿಧನರಾದ ಮಾಜಿ ಸಚಿವ ವಿ. ಶ್ರೀನಿವಾಸ ಪ್ರಸಾದ್(76) ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಿಂದ ಮೈಸೂರಿಗೆ ಸ್ಥಳಾಂತರ ಮಾಡಲಾಗುವುದು.

ಶ್ರೀನಿವಾಸ ಪ್ರಸಾದ್ ಅವರ ಪಾರ್ಥಿವ ಶರೀರವನ್ನು ಆಂಬುಲೆನ್ಸ್ ನಲ್ಲಿ ಮೈಸೂರಿನ ಜಯಲಕ್ಷ್ಮಿಪುರಂ ನಿವಾಸಕ್ಕೆ ತರಲಿದ್ದು, ಮನೆಯಲ್ಲಿ ವಿಧಿ ವಿಧಾನ ಪೂರೈಸಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.ಸಂಜೆ ಸರ್ಕಾರ ಗೌರವಗಳೊಂದಿಗೆ ಶ್ರೀನಿವಾಸ ಪ್ರಸಾದ್ ಅಂತ್ಯಸಂಸ್ಕಾರ ನೆರವೇರಲಿದೆ.

ರಾತ್ರಿ 1.20ಕ್ಕೆ ಹೃದಯಾಘಾತದಿಂದ ತಂದೆಯವರು ನಿಧನರಾಗಿದ್ದಾರೆ. ಮನೆಯಲ್ಲಿ ವಿಧಿ ವಿಧಾನ ಪೂರೈಸಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಬೆಂಗಳೂರಿನಲ್ಲಿ ಶ್ರೀನಿವಾಸ ಪ್ರಸಾದ್ ಪುತ್ರಿ ಪೂರ್ಣಿಮಾ ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!