ಬೆಂಗಳೂರು : ಯಶವಂತಪುರ ವಿಧಾನಸಭಾ ಕ್ಷೇತ್ರದ ಹೆರೋಹಳ್ಳಿ ವಾರ್ಡಿನ ಮಹದೇಶ್ವರ ನಗರದ ಮುಖ್ಯರಸ್ತೆ (ಆಕ್ಸ್ ಬ್ರಿಡ್ಜ್ ಕಾಲೇಜ್( ಹತ್ತಿರ ಬೆಂಗಳೂರು ಜಲಮಂಡಳಿ(ಬಿಡಬ್ಲ್ಯೂ ಎಸ್ಎಸ್) ಮತ್ತು ಒಳಚರಂಡಿ) ಇಲಾಖೆ ವತಿಯಿಂದ ಐದುನೂರು ಎಂಎಂ ಗಾತ್ರದ ಒಳಚರಂಡಿ ಪೈಪ್ ಲೈನ್ ಅಳವಡಿಕೆ (ಜೋಡಣೆ) ಕಾಮಗಾರಿಗೆ ಗುದ್ದಲಿ ಪೂಜೆ ಪುನಸ್ಕಾರ ಸಲ್ಲಿಸಿ ಕ್ಷೇತ್ರದ ಶಾಸಕ ಎಸ್ ಟಿ ಸೋಮಶೇಖರ್ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು ನಮ್ಮ ಕ್ಷೇತ್ರದಲ್ಲಿ ಕಾಮಗಾರಿಗಳು ಭರದಿಂದ ಸಾಗುತ್ತಿವೆ ಅದರಲ್ಲಿ ಕೆಲವು ಕಾಮಗಾರಿಗಳು ಮುಗಿಯುವ ಹಂತದಲ್ಲಿವೆ ಇನ್ನೂ ಕೆಲವು ಕಾಮಗಾರಿಗಳು ಪ್ರಗತಿಯಲ್ಲಿವೆ ನಮ್ಮ ಕ್ಷೇತ್ರದಲ್ಲಿ ಜನರಿಗೆ ಮೂಲಭೂತ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ನಮ್ಮ ವಾರ್ಡ ಅಧ್ಯಕ್ಷರು ಮುಖಂಡರು ಹಾಗೂ ಮಹಿಳಾ ಮುಖಂಡರು ವಾರ್ಡನಲ್ಲಿ ಆಗಬೇಕಾದ ಕೆಲಸಗಳನ್ನು ಗುರುತಿಸಿ ನಮ್ಮ ಮುಖಂಡರು ನನ್ನ ಗಮನಕ್ಕೆ ತಂದು ಅವುಗಳನ್ನು ಬಗೆಹರಿಸುವ ಕೆಲಸ ಮಾಡುತ್ತಿದ್ದೇನೆ ಒಟ್ಟಿನಲ್ಲಿ ಯಶವಂತಪುರ ಕ್ಷೇತ್ರ ಮಾದರಿ ಕ್ಷೇತ್ರವನ್ನಾಗಿ ಮಾಡುವುದೇ ನಮ್ಮ ಗುರಿಯಾಗಿದೆ ಎಂದು ಮಾಜಿ ಸಚಿವ ಹಾಗೂ ಕ್ಷೇತ್ರದ ಶಾಸಕ ಎಸ್ ಟಿ ಸೋಮಶೇಖರ್ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಹೆರೋಹಳ್ಳಿ ವಾರ್ಡ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಆದಿತ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀಧರ್, ಜಿಲ್ಲಾ ಕಾರ್ಯದರ್ಶಿ ಲೋಕೇಶ್ ಗೌಡ, ಶಾರದಮ್ಮ,ಜಿಲ್ಲಾ ಮಹಿಳಾ ಕಾರ್ಯದರ್ಶಿ ನಾಗವೇಣಿ, ಹೆರೋಹಳ್ಳಿ ಮಹಿಳಾ ಬ್ಲಾಕ್ ಅಧ್ಯಕ್ಷೆ ಸುಮಾ ಜನಾರ್ಧನ್, ಪ್ರಧಾನ ಕಾರ್ಯದರ್ಶಿ ಹೇಮಾ, ಯುವ ಘಟಕದ ಅಧ್ಯಕ್ಷ ನಿಖಿಲ್,ಪ್ರಧಾನ ಕಾರ್ಯದರ್ಶಿ ಮಮತಾ ವಾಗೀಶ್, ಶಮಂತಕ ಮಣಿ,
ರವಿಶಂಕರ್, ಚಂದ್ರಣ್ಣ, ದೇವೇಗೌಡರು, ಹನುಮಂತರಾಯಪ್ಪ (ಸೂರಿ), ಲೋಕೇಶ್, ಸುರೇಶ್, ಮಂಜು, ಶಶಿ, ಮಂಜಣ್ಣ ಸೇರಿದಂತೆ ಮಹದೇಶ್ವರ ನಗರದ ಸಮಸ್ತ ನಾಗರಿಕರು ಮಹಿಳೆಯರು ಮುಂತಾದವರು ಇದ್ದರು.
ವರದಿ: ಅಯ್ಯಣ್ಣ ಮಾಸ್ಟರ್