Ad imageAd image

ನಿಡಗುಂದಿಯಲ್ಲಿ ರಾಜ್ಯಮಟ್ಟದ ರಾಜಾ ಹಂಡೆಹನುಮಪ್ಪ ಜಯಂತಿ ಆಲಮಟ್ಟಿಯಲ್ಲಿ ಪತ್ರಿಕಾಗೋಷ್ಠಿ

Bharath Vaibhav
ನಿಡಗುಂದಿಯಲ್ಲಿ ರಾಜ್ಯಮಟ್ಟದ ರಾಜಾ ಹಂಡೆಹನುಮಪ್ಪ ಜಯಂತಿ ಆಲಮಟ್ಟಿಯಲ್ಲಿ ಪತ್ರಿಕಾಗೋಷ್ಠಿ
WhatsApp Group Join Now
Telegram Group Join Now

ಆಲಮಟ್ಟಿ: ನಿಡಗುಂದಿಯಲ್ಲಿ ರಾಜ್ಯಮಟ್ಟದ ರಾಜಾ ಹಂಡೆಹನುಮಪ್ಪ ಜಯಂತಿ ಆಚರಣೆ ನಡೆಯಲಿದೆ ಎಂದು ಡಾ. ಎಸ್.ಎಸ್. ಪಾಟೀಲ ತಿಳಿಸಿದ್ದಾರೆ.

ಆಲಮಟ್ಟಿಯ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, ಅಖಿಲ ಕರ್ನಾಟಕ ವೀರಶೈವ ಲಿಂಗಾಯತ ಹಂಡೇವಜೀರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಮುದ್ದೇಶ್ವರ ಕಲ್ಯಾಣ ಮಂಟಪದಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದರು.

ರಾಜಾ ಹಂಡೆಹನುಮಪ್ಪ ನಾಯಕರು ವಿಜಯಪುರ ಜಿಲ್ಲೆಯ ಮುತ್ತಗಿ ಗ್ರಾಮದಲ್ಲಿ ಜನಿಸಿ, ಬಂಕಾಪುರ, ಬಳ್ಳಾರಿ ಮತ್ತು ಅನಂತಪುರ ಪ್ರದೇಶಗಳಲ್ಲಿ ಸಾಮಂತ ಅರಸರಾಗಿ ಆಡಳಿತ ನಡೆಸಿದವರು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸ್ವಾಮೀಜಿಗಳು, ಸಚಿವರು, ಶಾಸಕರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.

ಈ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಸಮಾಜದ ಬಂಧುಗಳು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಪ್ರೇಮಕುಮಾರ ಮ್ಯಾಗೇರಿ, ಬಸವರಾಜ ವಂದಾಲ, ಶಂಕರಗೌಡ ಶಿವಣಗಿ, ಸಿದ್ದನಗೌಡ ಪಾಟೀಲ,ದೇವರ ಹಿಪ್ಪರಗಿ ಬಿಜೆಪಿ ಮಂಡಲ ಅಧ್ಯಕ್ಷ ಅವ್ವಣ್ಣ ಗ್ವಾತಗಿ ಮೊದಲಾದವರಿದ್ದರು.

ವರದಿ :ಅಲಿ ಮಕಾನದಾರ

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!