ಮುದಗಲ್ಲ : ಮಾಜಿ ಸಚಿವ ಶ್ರೀರಾಮುಲು ಅವರ ವಿರುದ್ಧ ಮಾತನಾಡುತ್ತಿರುವ ಶಾಸಕ ಜನಾರ್ದನ ರೆಡ್ಡಿ ಅವರ ವಿರುದ್ಧ ರಾಜ್ಯದಾದ್ಯಂತ ಚಳವಳಿ ರೂಪಿಸುವುದಾಗಿ ಎಂದು ಶ್ರೀ ರಾಮಲು ಅಭಿಮಾನಿಗಳು ಗಳಿಂದ ಎಚ್ಚರಿಕೆ ನೀಡಿದ್ದಾರೆ.
ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಶ್ರೀ ರಾಮುಲು ಅಭಿಮಾನಿಗಳಿಂದ
‘ಜನಾರ್ದನ ರೆಡ್ಡಿ ಅವರು ಶ್ರೀರಾಮುಲು ವಿರುದ್ಧ ‘ನೀನು ಕೀಳು ಜಾತಿಯವನು, ಕೊಡಲಿ ಹಿಡಿದುಕೊಂಡು ಬೀದಿಯಲ್ಲಿ ಓಡಾಡುತ್ತಿದ್ದವನು, ನಿನ್ನ ರಾಜಕೀಯ ಜೀವನ ರೂಪಿಸಿದ್ದು ನಾನು’ ಎಂದೆಲ್ಲ ಮಾತನಾಡಿದ್ದಾರೆ.
ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲಾಗುವುದು. ಜನಾರ್ದನ ರೆಡ್ಡಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು, ಜಾತಿ ನಿಂದನೆ ಪ್ರಕರಣ ದಾಖಲು ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿದ್ದರು
ಜನಾರ್ದನ ರೆಡ್ಡಿ ಕ್ಷಮೆ ಕೇಳಬೇಕು, ಬಿಜೆಪಿಯಿಂದ ಅವರನ್ನು ಹೊರ ಹಾಕಬೇಕು. ಶ್ರೀರಾಮುಲು ಅವರಿಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರೇ ಬೆಂಬಲ ಸೂಚಿಸಿದ್ದಾರೆ. ಶ್ರೀರಾಮುಲು ಮನಸ್ಥಿತಿ ಏನು, ರೆಡ್ಡಿ ಮನಸ್ಥಿತಿ ಏನು ಎಂಬುದು ಪಕ್ಷಕ್ಕೂ ಗೊತ್ತಾಗಿದೆ. ನಾವು ರಾಮುಲು ಪರವಾಗಿ ಇರುತ್ತೇವೆ’ ಎಂದರು.
ಈ ಸಂದರ್ಭದಲ್ಲಿ ಶ್ರೀ ರಾಮುಲು ಅಭಿಮಾನಿಗಳಾದ ಮೌನೇಶ ನಾಗರಾಜ ,ನೇತಾಜಿ, ಅರುಣ , ಉಪಸ್ಥಿತರಿದ್ದರು
ವರದಿ: ಮಂಜುನಾಥ ಕುಂಬಾರ