Ad imageAd image

ಜೈ ಶ್ರೀರಾಮ್ ಹಾಡು ಹಾಕಿದ್ದಕ್ಕೆ ಪರಸ್ಪರ ಹೊಡೆದಾಡಿಕೊಂಡ ವಿದ್ಯಾರ್ಥಿಗಳು

Bharath Vaibhav
ಜೈ ಶ್ರೀರಾಮ್ ಹಾಡು ಹಾಕಿದ್ದಕ್ಕೆ ಪರಸ್ಪರ ಹೊಡೆದಾಡಿಕೊಂಡ ವಿದ್ಯಾರ್ಥಿಗಳು
CRIME
WhatsApp Group Join Now
Telegram Group Join Now

ಬೀದರ್ : ಕಾಲೇಜು ಕಾರ್ಯಕ್ರಮ ಒಂದರಲ್ಲಿ ಜೈ ಶ್ರೀರಾಮ್ ಹಾಡು ಹಾಕಿದ್ದಕ್ಕೆ ಹಿಂದೂ ಹಾಗೂ ಮುಸ್ಲಿಂ ವಿದ್ಯಾರ್ಥಿಗಳು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ಬೀದರ್ ನ ಮೈಲೂರು ಕ್ರಾಸ್ ಬಳಿ ಇರುವ ಜಿಎನ್ಡಿ ಡಿಗ್ರಿ ಕಾಲೇಜಿನಲ್ಲಿ ನಡೆದಿದೆ.

ಹೌದು ಬೀದರ್ ನ ಜಿ ಏನ್ ಡಿ ಕಾಲೇಜಿನಲ್ಲಿ ಇಂದು ಕಾಲೇಜು ಕಾರ್ಯಕ್ರಮ ನಡೆಯುತ್ತಿತ್ತು.ಈ ವೇಳೆ ಜೈ ಶ್ರೀ ರಾಮ್ ಹಾಡು ಹಾಕಿದ್ದಕ್ಕೆ ಗಲಾಟೆ ಆರಂಭವಾಗಿದೆ. ಈ ವೇಳೆ ಹಿಂದೂ ಹಾಗೂ ಮುಸ್ಲಿಂ ವಿದ್ಯಾರ್ಥಿಗಳು ಪರಸ್ಪರ ಕಾಲೇಜು ಸಭಾಂಗಣದಲ್ಲೇ ಹೊಡೆದಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಬೀದರ್ ನ ಮೈಲೂರು ಕ್ರಾಸ್ ನಲ್ಲಿರುವ ಗುರುನಾನಕ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ.ಘಟನೆಯು ಗಾಂಧಿ ಗಂಜಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗುತ್ತಿದೆ. ಘಟನಾ ಸ್ಥಳಕ್ಕೆ ಸಚಿವ ಈಶ್ವರ ಖಂಡ್ರೆ ಹಾಗೂ ರಹೀಮ್ ಖಾನ್ ಭೇಟಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

 

 

WhatsApp Group Join Now
Telegram Group Join Now
Share This Article
error: Content is protected !!