ಬೆಂಗಳೂರು : ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ರಚಿಸಲಾಗಿದ್ದ ನಿವೃತ್ತ ನ್ಯಾ. ನಾಗಮೋಹನ್ ದಾಸ್ ಅವರ ಸಮಿತಿಯು 104 ಪುಟಗಳ ಮಧ್ಯಂತರ ವರದಿಯನ್ನು ಇಂದು ಸಲ್ಲಿಸಿದೆ.
ಮಧ್ಯಂತರ ವರದಿಯನ್ನು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಮಧ್ಯಂತರ ವರದಿ ಕೊಡಿ ಎಂದು ಸರ್ಕಾರ ಕೇಳಿರಲಿಲ್ಲ. ಎರಡು ತಿಂಗಳಿನಿಂದ ವರದಿಯನ್ನು ರಚಿಸಲಾಗಿದೆ. 104 ಪುಟಗಳ ಇರುವ ವರದಿಯನ್ನು ಸಲ್ಲಿಕೆ ಮಾಡಿದ್ದೇವೆ. ಈ ಬಗ್ಗೆ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದು ನ್ಯಾ.ನಾಗಮೋಹನ್ ದಾಸ್ ಅವರು ತಿಳಿಸಿದರು.
ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್, ಸಚಿವರಾದ ಕೆ.ಹೆಚ್.ಮುನಿಯಪ್ಪ, ಹೆಚ್.ಸಿ. ಮಹದೇವಪ್ಪ, ಆರ್.ಬಿ.ತಿಮ್ಮಾಪುರ್, ಮಾಜಿ ಸಚಿವ ಎಚ್. ಆಂಜನೇಯ, ಶಾಸಕ ಬಸಂತಪ್ಪ ಸೇರಿ ಹಲವರು ಉಪಸ್ಥಿತರಿದ್ದರು.