ಮದ್ದೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನನ್ನ ಸ್ಪರ್ಧೆ ಖಚಿತವಾಗಿದೆ ಎಂದು ಮಾಜಿ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎನ್ನುವುದನ್ನು ಬಿಜೆಪಿ ವರಿಷ್ಠರು ತೀರ್ಮಾನಿಸುತ್ತಾರೆ.ಆದರೆ, ಮದ್ದೂರು ಕ್ಷೇತ್ರ ನನ್ನ ಪ್ರಥಮ ಆದ್ಯತೆಯಾಗಿದೆ.
ನಾನು ಅಥವಾ ಪುತ್ರ ಅಭಿಷೇಕ್ ಪೈಕಿ ಯಾರೇ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದರೂ ಅದು ಮದ್ದೂರಿನಿಂದಲೇ ಎಂದು ತಿಳಿಸಿದ್ದಾರೆ.




