Ad imageAd image
- Advertisement -  - Advertisement -  - Advertisement - 

ಪತ್ನಿಯ ಶೀಲ ಶಂಕಿಸಿ ಕಳೆದ ಶೆಡ್‌ನಲ್ಲಿ ಕೂಡಿ ಹಾಕಿ ಕಾನ್ಸ್ಟೆಬಲ್ ನಿಂದ ಹಲ್ಲೆ

Bharath Vaibhav
ಪತ್ನಿಯ ಶೀಲ ಶಂಕಿಸಿ ಕಳೆದ ಶೆಡ್‌ನಲ್ಲಿ ಕೂಡಿ ಹಾಕಿ ಕಾನ್ಸ್ಟೆಬಲ್ ನಿಂದ ಹಲ್ಲೆ
WhatsApp Group Join Now
Telegram Group Join Now

ಬೆಳಗಾವಿ: ಪತ್ನಿಯ ಶೀಲ ಶಂಕಿಸಿದ ಪೊಲೀಸ್ ಪೇದೆಯೊಬ್ಬ ಕಳೆದ 2 ತಿಂಗಳಿನಿಂದ ಶೆಡ್‌ನಲ್ಲಿ ಕೂಡಿ ಹಾಕಿ ಅಮಾನುಷವಾಗಿ ಹಲ್ಲೆ ನಡೆಸಿರುವಂತಹ ಆಘಾತಕಾರಿ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ನಟ ದರ್ಶನ್‌ ಹಾಗೂ ಗ್ಯಾಂಗ್‌ ಶೆಡ್‌ನಲ್ಲಿ ಕೂಡಿ ಹಾಕಿ ಥಳಿಸಿ ಕೊಂದಿರುವ ಘಟನೆ ದೇಶಾದ್ಯಂತ ಸುದ್ದಿಯಲ್ಲಿರುವಾಗಲೇ ವಿಜಯಪುರ ಜಿಲ್ಲೆಯ ತಿಕೋಟಾದಲ್ಲಿ ಪೊಲೀಸ್ ಪದೆಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ವ್ಯಕ್ತಿ ಯಲ್ಲಪ್ಪ ಅಗಸೆ ಪತ್ನಿ ಪ್ರತಿಮಾಳ ಶೀಲ ಶಂಕಿಸಿ ಶೆಡ್‌ನಲ್ಲಿ ಕೂಡಿಟ್ಟು ಹಲ್ಲೆ ಮಾಡಿ ಬರೆ ಹಾಕಿದ್ದಾನೆ.

10 ವರ್ಷಗಳ ಹಿಂದೆ ಯಲ್ಲಪ್ಪ ಹಾಗೂ ಪ್ರತಿಮಾ ಮದುವೆಯಾಗಿದ್ದು, ಸದ್ಯ ಯಲ್ಲಪ್ಪ ವಿಜಯಪುರ ತಾಲೂಕಿನ ತಿಕೋಟಾದಲ್ಲಿ ಪೊಲೀಸ್ ಪೇದೆಯಾಗಿ ಕೆಲಸ ಮಾಡುತ್ತಿದ್ದಾನೆ. ಇವರಿಗೆ ಮೂವರು ಮಕ್ಕಳಿದ್ದರೂ ಪತ್ನಿಯ ಶೀಲದ ಮೇಲೆ ಶಂಕೆ ಮಾಡಿ ಶೆಡ್ನಲ್ಲಿ ಕೂಡಿ ಹಾಕಿ ಮನಸೋ ಇಚ್ಚೆ ಹಲ್ಲೆ ಮಾಡಿ ಬರೆ ಹಾಕಿದ್ದಾನೆ.

ಈ ಬಗ್ಗೆ ಮಾತನಾಡಿರುವ ಮಹಿಳೆ, ನನ್ನ ತವರು ಮನೆಯವರು ನನ್ನನ್ನು ನೋಡಲು ಬಂದಾಗ ಅವರಿಗೂ ಸಹ ನನ್ನ ಪತಿ ಬೆದರಿಕೆ ಹಾಕಿದ್ದಾರೆ. ನಿಮ್ಮ ಮಗಳು ಬೇರೆಯವನೊಂದಿಗೆ ಓಡಿ ಹೋಗಿದ್ದಾಳೆ ಎಂದು ದೂರು ಕೊಟ್ಟು ನಿಮ್ಮ ಮೇಲೆಯೇ ಕೇಸ್ ದಾಖಲಿಸುತ್ತೇನೆ ಎಂದು ಬೇದರಿಕೆ ಹಾಕಿದ್ದಾನೆ ಎಂದು ಆರೋಪಿಸಿದ್ದಾರೆ.

ಶೆಡ್‌ನಲ್ಲಿ ಯಾರೂ ಇಲ್ಲದ ವೇಳೆ ತಪ್ಪಿಸಿಕೊಂಡು ಬಂದು ಬೆಳಗಾವಿಯ ಮಹಿಳಾ ಸಂಘದ ಸಹಾಯದಿಂದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ನಾಳೆ ಬೆಳಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ ಅವರನ್ನು ಭೇಟಿಯಾಗಿ ನನ್ನ ಪತಿಯ ಮೇಲೆ ದೂರು ಕೊಡುವುದಾಗಿ ಪ್ರತಿಮಾ ಸುದ್ದಿಗಾರರಿಗೆ ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!