Ad imageAd image

ಫೋನ್ ಪೇ ನಲ್ಲಿ ಲಂಚ ಪಡೆದ ಇಬ್ಬರು ಕಾನ್ಸ್ಟೇಬಲ್ ಗಳ ಅಮಾನತು

Bharath Vaibhav
ಫೋನ್ ಪೇ ನಲ್ಲಿ ಲಂಚ ಪಡೆದ ಇಬ್ಬರು ಕಾನ್ಸ್ಟೇಬಲ್ ಗಳ ಅಮಾನತು
WhatsApp Group Join Now
Telegram Group Join Now

ಯಾದಗಿರಿ: ದೂರುದಾರರಿಂದ ಫೋನ್ ಪೇ ನಲ್ಲಿ ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಯಾದಗಿರಿ ತಾಲೂಕಿನ ಗುರುಮಠಕಲ್ ಪೊಲೀಸ್ ಠಾಣೆಯ ಇಬ್ಬರು ಕಾನ್ಸ್ಟೇಬಲ್ ಗಳನ್ನು ಅಮಾನತು ಮಾಡಲಾಗಿದೆ.

ವಿಶ್ವನಾಥ ರೆಡ್ಡಿ ಮತ್ತು ಗೋಪಾಲ ರೆಡ್ಡಿ ಅಮಾನತುಗೊಂಡವರು. ಇತ್ತೀಚೆಗೆ ಹಲ್ಲೆ ಪ್ರಕರಣವೊಂದರಲ್ಲಿ ಐವರನ್ನು ಬಂಧಿಸಲು ದೂರುದಾರರಿಂದ ತಲಾ 10 ಸಾವಿರ ರೂ.ಗಳನ್ನು ಫೋನ್ ಮೂಲಕ ಪಡೆದಿದ್ದರು ಎಂದು ಆರೋಪಿಸಲಾಗಿತ್ತು.

ಈ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲು ಡಿವೈಎಸ್ಪಿಗೆ ಸೂಚನೆ ನೀಡಲಾಗಿತ್ತು. ಡಿವೈಎಸ್ಪಿ ನೀಡಿದ ವರದಿ ಆಧಾರದ ಮೇಲೆ ಇಬ್ಬರನ್ನು ಎಸ್ಪಿ ಪೃಥ್ವಿಕ್ ಶಂಕರ್ ಅಮಾನತು ಮಾಡಿ ಆದೇಶಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!