Ad imageAd image

ಭಾರತದ ಸಶಸ್ತ್ರ ಪಡೆಗಳ ಶೌರ್ಯಕ್ಕೆ ಅಶ್ವಿನಿ ಪುನೀತ್​ ರಾಜ್​​​ಕುಮಾರ್ ಮೆಚ್ಚುಗೆ

Bharath Vaibhav
ಭಾರತದ ಸಶಸ್ತ್ರ ಪಡೆಗಳ ಶೌರ್ಯಕ್ಕೆ ಅಶ್ವಿನಿ ಪುನೀತ್​ ರಾಜ್​​​ಕುಮಾರ್ ಮೆಚ್ಚುಗೆ
WhatsApp Group Join Now
Telegram Group Join Now

ಏಪ್ರಿಲ್​​ 22ರಂದು ಭಾರತದ ಅತ್ಯಂತ ಸುಂದರ ಪ್ರವಾಸಿ ತಾಣ ಜಮ್ಮು ಕಾಶ್ಮೀರದ ಪಹಲ್ಗಾಮ್​ನ ಬೈಸರನ್​ನಲ್ಲಿ ಉಗ್ರರ ಅಟ್ಟಹಾಸ ನಡೆದಿತ್ತು. ಮಂಗಳವಾರ, ನಡೆದ ಪೈಶಾಚಿಕ ಉಗ್ರರ ದಾಳಿಯಲ್ಲಿ 26 ಅಮಾಯಕರು ಕೊನೆಯುಸಿರೆಳೆದರು. ಭಯೋತ್ಪಾದಕರ ಹೀನ ಕೃತ್ಯಕ್ಕೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ದುರ್ಘಟನೆಗೆ ಪ್ರತೀಕಾರವಾಗಿ ಭಾರತ ಬುಧವಾರ ಮುಂಜಾನೆ ಪಾಕ್​ನಲ್ಲಿನ​​​ ಭಯೋತ್ಪಾದಕ ತಾಣಗಳ ಮೇಲೆ ದಾಳಿ ನಡೆಸಿತು.

ಅಂದು ‘ಆಪರೇಷನ್​​ ಸಿಂಧೂರ’ ಅಡಿ ಪಾಕ್​ ಆಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದೊಳಗಿನ ಒಟ್ಟು 9 ಭಯೋತ್ಪಾದಕ ತಾಣಗಳನ್ನು ಧ್ವಂಸಗೊಳಿಸಿತು. ಆನಂತರ ಎರಡೂ ರಾಷ್ಟ್ರಗಳಿಂದ ದಾಳಿ – ಪ್ರತಿದಾಳಿ ನಡೆಯುತ್ತಿದೆ. ಭಾರತ ಉಗ್ರನೆಲೆಗಳನ್ನಷ್ಟೇ ಗುರಿಯಾಗಿಸಿ ದಾಳಿ ಮಾಡಿದೆ. ನಮ್ಮ ಭಾರತದ ಸಶಸ್ತ್ರ ಪಡೆಗಳ ಶೌರ್ಯಕ್ಕೆ ದೇಶಾದ್ಯಂತ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಆಶ್ವಿನಿ ಪುನೀತ್ ರಾಜ್​​​ಕುಮಾರ್ ಪೋಸ್ಟ್: ಭಾರತ ಚಿತ್ರರಂಗದ ಹೆಸರಾಂತರೂ ಕೂಡಾ ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ. ಅದರಂತೆ, ಕನ್ನಡ ಚಿತ್ರರಂಗದ ನಿರ್ಮಾಪಕಿ ಅಶ್ವಿನಿ ಪುನೀತ್​ ರಾಜ್​​​ಕುಮಾರ್ ತಮ್ಮ ಅಧಿಕೃತ ಇನ್​ಸ್ಟಾಗ್ರಾಮ್​ ಸ್ಟೋರಿ ಸೆಕ್ಷನ್​​ನಲ್ಲಿ, ಸಶಸ್ತ್ರ ಪಡೆಗಳಿಗೆ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿ, ಬೆಂಬಲ ಸೂಚಿಸಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!