Ad imageAd image

ಕರ್ನಾಟಕದಲ್ಲಿ ತಾಲಿಬಾನ್ ಮಾದರಿ ಕೃತ್ಯ : ಮಹಿಳೆಯನ್ನು ಮರಕ್ಕೆ ಕಟ್ಟಿ ಥಳಿತ

Bharath Vaibhav
ಕರ್ನಾಟಕದಲ್ಲಿ ತಾಲಿಬಾನ್ ಮಾದರಿ ಕೃತ್ಯ : ಮಹಿಳೆಯನ್ನು ಮರಕ್ಕೆ ಕಟ್ಟಿ ಥಳಿತ
WhatsApp Group Join Now
Telegram Group Join Now

ರಾಯಚೂರು : ಕರ್ನಾಟಕದಲ್ಲಿ ತಾಲಿಬಾನ್ ಮಾದರಿ ಕೃತ್ಯವೊಂದು ನಡೆದಿದ್ದು, ವ್ಯಕ್ತಿ ಸಾವಿಗೆ ಮಹಿಳೆಯೇ ಕಾರಣವೆಂದು ಆರೋಪಿಸಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥಳಿಸಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿಯಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಸಾರ್ವಜನಿಕರ ಮುಂದೆಯೇ ಥಳಿಸಿರುವ ಘಟನೆ ನಡೆದಿದೆ.

ಸ್ಥಳಕ್ಕೆ ಆಗಮಿಸಿ ಮಹಿಳೆಯನ್ನು ಜಾಲಹಳ್ಳಿ ಠಾಣೆ ಪೊಲೀಸರು ರಕ್ಷಿಸಿದ್ದು, ಹಲ್ಲೆ ಆರೋಪದಡಿ ನಾಲ್ವರ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ.

ಬಸವರಾಜ ನಾಯಕ, ಯಂಕಮ್ಮ, ದುರ್ಗಮ್ಮ, ರೇಣುಕಾರಿಂದ ಮಹಿಳೆ ಮೇಲೆ ಹಲ್ಲೆ ಮಾಡಲಾಗಿದೆ. ಬಸವರಾಜನ ಅಣ್ಣ ರಂಗಪ್ಪ ಸಾವಿಗೆ ಮಹಿಳೆ ಕಾರಣವೆಂದು ಆರೋಪಿಸಿದ್ದಾರೆ. 20 ದಿನಗಳ ಹಿಂದೆ ಮೂರ್ಛೆ ರೋಗದಿಂದ ರಂಗಪ್ಪ ಮೃತಪಟ್ಟಿದ್ದರು.

ಈ ಹಿನ್ನೆಲೆಯಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ನೂರಾರು ಜನರ ಮುಂದೆಯೇ ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ. ಸದ್ಯ ಘಟನೆ ಸಂಬಂಧ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!