Ad imageAd image

ಪೆ.15ರಂದು ತಾಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ

Bharath Vaibhav
ಪೆ.15ರಂದು ತಾಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ
WhatsApp Group Join Now
Telegram Group Join Now

ಸಿರುಗುಪ್ಪ : ನಗರದ ಸರ್ಕಾರಿ ನೌಕರರ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕದ ವತಿಯಿಂದ ದಿನಾಂಕ 15, ಶನಿವಾರದಂದು ನಡೆಯುವ 7ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಕುರಿತು ಪತ್ರಿಕಾ ಗೋಷ್ಠಿ ನಡೆಸಲಾಯಿತು.

ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕದ ಅಧ್ಯಕ್ಷರಾದ ಡಾ.ಮದುಸೂಧನ ಕಾರಿಗನೂರು ಅವರು ಮಾತನಾಡಿ ದತ್ತಿ ಉಪನ್ಯಾಸಗಳು, ರಸಪ್ರಶ್ನೆ, ಭಾಷಣಸ್ಪರ್ಧೆ, ಪ್ರಬಂಧಸ್ಪರ್ಧೆ, ಆರೋಗ್ಯ ಮಾಹಿತಿಯಂತಹ ಹಲವಾರು ಕಾರ್ಯಕ್ರಮಗಳ ಮೂಲಕ ಕನ್ನಡ ಜಾಗೃತಿಯನ್ನು ಹಮ್ಮಿಕೊಂಡು ಬಂದಿದೆ.

ದಿನಾಂಕ 15, ಶನಿವಾರದಂದು ಶ್ರೀ ಅಭಯಾಂಜನೇಯ್ಯ ಸ್ವಾಮಿ ದೇವಸ್ಥಾನದ ಎದುರಿಗಿರುವ ಬಯಲು ಜಾಗದಲ್ಲಿ ತಾಲೂಕು ಮಟ್ಟದ 7ನೇ ಸಾಹಿತ್ಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದ್ದು, ನಿವೃತ್ತ ಉಪನ್ಯಾಸಕರಾದ ಶಿವಕುಮಾರ.ಎಸ್.ಬಳಿಗಾರ ಅವರನ್ನು ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.

ಬೆಳಿಗ್ಗೆ ಧ್ವಜಾರೋಹಣ, ಭುವನೇಶ್ವರಿ ಮಾತೆಯ ಮೆರವಣಿಗೆ, ಸಮ್ಮೇಳನದ ಉದ್ಘಾಟನೆ, ಮದ್ಯಾಹ್ನ ಸಾಹಿತ್ಯ ಗೋಷ್ಠಿಗಳು ಹಾಗೂ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ತಾಲೂಕಿನ ಸಾಹಿತಿಗಳ ಬರಹಗಳ ಸ್ಮರಣಸಂಚಿಕೆಯನ್ನು ಹೊರತರಲಾಗುತ್ತಿದೆ.

ದೂರದರ್ಶನ ಚಂದನದ “ಥಟ್ ಅಂತ ಹೇಳಿ” ರಸಪ್ರಶ್ನೆಯ ಮೂಲಕ ಕನ್ನಡದ ಕಂಪು ಹಾಗೂ ಜ್ಞಾನವನ್ನು ಪಸರಿಸುತ್ತಿರುವ ಡಾ.ನಾ.ಸೋಮೇಶ್ವರ್ ಅವರು ಉದ್ಘಾಟನಾದ ಮುಖ್ಯ ಅಥಿತಿಗಳಾಗಿದ್ದಾರೆ.

ಶಾಸಕರು, ಇನ್ನಿತರ ಜನಪ್ರತಿನಿಧಿಗಳು, ತಾಲೂಕಾಡಳಿತದ ಬೆಂಬಲದೊಂದಿಗೆ ನಡೆಯುತ್ತಿರುವ ಸಮ್ಮೇಳನದಲ್ಲಿ ಎಲ್ಲಾ ಕನ್ನಡಾಭಿಮಾನಿಗಳು ಸಮ್ಮೇಳನದಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ತಿಳಿಸಿದರು.

ಇದೇ ವೇಳೆ ಘಟಕದ ಗೌರವ ಕಾರ್ಯದರ್ಶಿ ಗಜೇಂದ್ರ, ನಗರ ಘಟಕದ ಅಧ್ಯಕ್ಷ ಕೆ.ಎಮ್.ಚಂದ್ರಕಾಂತ ನಿವೃತ್ತ ಶಿಕ್ಷಕರಾದ ನರಸಿಂಹಮೂರ್ತಿ, ಉಪನ್ಯಾಸಕರಾದ ಹರೀಶ್ ಇದ್ದರು.

ವರದಿ : ಶ್ರೀನಿವಾಸ ನಾಯ್ಕ

WhatsApp Group Join Now
Telegram Group Join Now
Share This Article
error: Content is protected !!