Ad imageAd image

ನಟ ದರ್ಶನ್ ಬಂಧನದ ಹಿನ್ನೆಲೆ ಮನನೊಂದು ಅಭಿಮಾನಿ ಆತ್ಮಹತ್ಯೆ

Bharath Vaibhav
WhatsApp Group Join Now
Telegram Group Join Now

ಚನ್ನಪಟ್ಟಣ : ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನದ ಹಿನ್ನೆಲೆ ಮನನೊಂದು ಅಭಿಮಾನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚನ್ನಪಟ್ಟಣ ತಾಲೂಕಿನ ಮಾಳೆ ಗ್ರಾಮದಲ್ಲಿ ನಡೆದಿದೆ.

ದರ್ಶನ್ ಅಭಿಮಾನಿ ಭೈರೇಶ್ ಎಂಬಾತ ಮೋರಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದು, ದರ್ಶನ್ ಬಂಧನದ ಹಿನ್ನೆಲೆ ಖಿನ್ನತೆಗೆ ಒಳಗಾಗಿದ್ದ ಭೈರೇಶ್ ಮೋರಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಸಹಚರರನ್ನು ಕಳೆದ ವಾರ ಬಂಧಿಸಲಾಗಿತ್ತು. ಈ ಘಟನೆ ನಡೆದ ಬಳಿಕ ದರ್ಶನ್ ಅಭಿಮಾನಿ ಭೈರೇಶ್ ಅನ್ನ ನೀರು ಬಿಟ್ಟು ಖಿನ್ನತೆಗೆ ಒಳಗಾಗಿದ್ದನು ಎನ್ನಲಾಗಿದೆ. ನಂತರ ಮೋರಿಗೆ ಬಿದ್ದು ಮೃತಪಟ್ಟಿದ್ದಾನೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ನಿಖರ ಮಾಹಿತಿ ಶೀಘ್ರದಲ್ಲೇ ಅಪ್ ಡೇಟ್ ಆಗಲಿದೆ.

WhatsApp Group Join Now
Telegram Group Join Now
Share This Article
error: Content is protected !!