ಬೈಲಹೊಂಗಲ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಯುವ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಾಹುಲ ಅಣ್ಣಾ ಜಾರಕಿಹೊಳಿ ಅವರು ಬೈಲಹೊಂಗಲದಲ್ಲಿ ನಡೆಯಲಿರುವ ಬೆಳಗಾವಿ ಜಿಲ್ಲಾ ಗ್ರಾಮೀಣ ಯುವ ಕಾಂಗ್ರೆಸ್ ನ ಪದಗ್ರಹಣ ಸಮಾರಂಭದ ಹಿನ್ನೆಲೆಯಲ್ಲಿ ಇಂದು ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು, ಸಮಾರಂಭದ ಪೂರ್ವಸಿದ್ಧತೆಗಳ ಬಗ್ಗೆ ಚರ್ಚೆ ನಡಿಸಿದರು.

ಈ ವೇಳೆ ರಾಜ್ಯ ಯುವ ಕಾಂಗ್ರೆಸ್ ನ ಉಪಾಧ್ಯಕ್ಷರಾದ ಅಬ್ದುಲ್ ದೇಸಾಯಿ, ಮುನಾಲ್ ಹೆಬ್ಬಾಳ್ಕರ್ ಕಾರ್ತಿಕ ಪಾಟೀಲ, ಜಿಲ್ಲೆಯ ಎಲ್ಲ ಯುವ ಕಾಂಗ್ರೆಸ್ ಪದಾಧಿಕಾರಿಗಳು, ಜಿಲ್ಲಾ ಕಾರ್ಯಕಾರಿಣಿ ಸದಸ್ಯರು ಉಪಸ್ಥಿತರಿದ್ದರು.
ವರದಿ : ರಾಜು ಮುಂಡೆ




