ಜಮ್ಮು: ಜಮ್ಮು & ಕಾಶ್ಮೀರದಲ್ಲಿ ಅಮರನಾಥ ಯಾತ್ರೆ ಜುಲೈ 3 ರಿಂದ ಆಗಸ್ಟ್ 9 ರವರೆಗೆ ನಡೆಸಲು ಎಂದು ರಾಜಭವನದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರ ಅಧ್ಯಕ್ಷತೆಯಲ್ಲಿ ನಡೆದ ಶ್ರೀ ಅಮರನಾಥ ಜಿ ಶ್ರೈನ್ ಬೋರ್ಡ್ (ಎಸ್ಎಎಸ್ಬಿ) 48 ನೇ ಮಂಡಳಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ದಕ್ಷಿಣ ಕಾಶ್ಮೀರದ ಅಮರನಾಥದ 3,880 ಮೀಟರ್ ಎತ್ತರದ ಪವಿತ್ರ ಗುಹಾ ದೇಗುಲಕ್ಕೆ 38 ದಿನಗಳ ವಾರ್ಷಿಕ ಯಾತ್ರೆ ಜುಲೈ 3 ರಂದು ಪ್ರಾರಂಭವಾಗಲಿದೆ.
ಈ ವರ್ಷ, ಯಾತ್ರೆ ಜುಲೈ 3 ರಂದು ಎರಡೂ ಮಾರ್ಗಗಳಿಂದ ಏಕಕಾಲದಲ್ಲಿ ಪ್ರಾರಂಭವಾಗುತ್ತದೆ – ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ಟ್ರ್ಯಾಕ್ ಮತ್ತು ಗಂಡರ್ಬಾಲ್ ಜಿಲ್ಲೆಯ ಬಾಲ್ಟಾಲ್ ಮತ್ತು ಆಗಸ್ಟ್ 9 ರಂದು ಮುಕ್ತಾಯಗೊಳ್ಳಲಿದೆ.
ಈ ಸಭೆಯಲ್ಲಿ ದೇಗುಲ ಮಂಡಳಿಯ ಸದಸ್ಯರು ಭಾಗವಹಿಸಿದ್ದರು, ಭಕ್ತರಿಗೆ ಸೌಲಭ್ಯಗಳು ಮತ್ತು ಸೇವೆಗಳನ್ನು ಇನ್ನಷ್ಟು ಸುಧಾರಿಸಲು ವಿವಿಧ ಕ್ರಮಗಳು ಮತ್ತು ಮಧ್ಯಸ್ಥಿಕೆಗಳನ್ನು ಪ್ರಸ್ತಾಪಿಸಲಾಗಿದೆ ಎಂದು ತಿಳಿಸಿದ್ದಾರೆ.
ಅಮರನಾಥ ಯಾತ್ರೆಗೆ ಯಾತ್ರಿಕರ ಸಂಖ್ಯೆ ಹೆಚ್ಚುವ ಸಾಧ್ಯತೆಯನ್ನು ಪರಿಗಣಿಸಿ ಜಮ್ಮು, ಶ್ರೀನಗರ ಮತ್ತು ಇತರ ಸ್ಥಳಗಳಲ್ಲಿನ ಕೇಂದ್ರಗಳಲ್ಲಿ ವಸತಿ ಸಾಮರ್ಥ್ಯವನ್ನು ಹೆಚ್ಚಿಸುವ ಬಗ್ಗೆ ಈ ಬಾರಿ ಕ್ರಮ ಕೈಗೊಳ್ಳಲು ಸಭೆಯಲ್ಲಿ ನಿರ್ಧರಿಸಲಾಗಿದೆ.




