Ad imageAd image

ತುಂಗಾಭದ್ರಾ ನದಿಯಲ್ಲಿ ಈಜಲು ಜಿಗಿದ ವೈದ್ಯೆ ಸಾವು

Bharath Vaibhav
ತುಂಗಾಭದ್ರಾ ನದಿಯಲ್ಲಿ ಈಜಲು ಜಿಗಿದ ವೈದ್ಯೆ ಸಾವು
WhatsApp Group Join Now
Telegram Group Join Now

ಕೊಪ್ಪಳ : ತುಂಗಾಭದ್ರಾ ನದಿಯಲ್ಲಿ ಈಜಲು ಹೋಗಿ ವೈದ್ಯೆ ಸಾವನ್ನಪ್ಪಿದ ಘಟನೆ ತಾಲೂಕಿನ ಸಣಾಪುರದ ಬಳಿ ನಡೆದಿದೆ. ನೀರಿನಲ್ಲಿ ನಾಪತ್ತೆಯಾದ ವೈದ್ಯೆಯನ್ನು ಹೈದರಾಬಾದ್ ಮೂಲದ ನಾಂಪಲ್ಲಿ ಪ್ರದೇಶದ ನಿವಾಸಿ ಅನನ್ಯಾ ರಾವ್ ಎಂದು ಗುರುತಿಸಲಾಗಿದೆ.

ಹೈದರಾಬಾದ್ ನ ವಿಕೆಸಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಸ್ನೇಹಿತರ ಜೊತೆ ಕೊಪ್ಪಳಕ್ಕೆ ಪ್ರವಾಸ ಸಾಣಾಪುರದಲ್ಲಿ ಈ ಘಟನೆ ನಡೆದಿದೆ. ಅನನ್ಯಾ ರಾವ್ ನೀರಿನಲ್ಲಿ ಕೊಚ್ಚಿ ಹೋಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಹುಡುಕಾಟ ನಡೆಸುತ್ತಿದೆ.

ಸ್ನೇಹಿತರ ಜೊತೆ ಪ್ರವಾಸಕ್ಕೆಂದು ಹೋದ ಮಹಿಳೆ ನೀರಿನಲ್ಲಿ ಜಿಗಿದಿದ್ದಾರೆ. ನೀರಿಗೆ ಜಿಗಿಯುವ ದೃಶ್ಯಗಳನ್ನು ಸ್ನೇಹಿತರು ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!