ಮುದಗಲ್ಲ : ಪೋಲಿಸ್ ಠಾಣೆಯಲ್ಲಿ ಮುಂಭಾಗದಲ್ಲಿ ಮುದಗಲ್ಲ ನ ಭಾರತೀಯ ಜನತಾ ಪಕ್ಷ ಆಯೋಜಿಸಿದ್ದ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯ ಸಾಧಿಸಿದ ಸಂಭ್ರಮಾಚರಣೆ ಮಾಡಲಾಯಿತು
ಈ ಸಂದರ್ಭದಲ್ಲಿ ಮಾತನಾಡಿದ ಪಕೀರಪ್ಪ ಕುರಿ ಅವರು ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಪೂರ್ಣ ಬಹುಮತದೊಂದಿಗೆ ಬಿಜೆಪಿ ಭರ್ಜರಿ ಜಯ ಸಾಧಿಸಿದೆ. ಆಮ್ ಆದ್ಮಿ ಪಕ್ಷದ (AAP) ಹ್ಯಾಟ್ರಿಕ್ ಕನಸು ಭಗ್ನವಾಗಿದೆ. 27 ವರ್ಷಗಳ ಬಳಿಕ ರಾಷ್ಟ್ರ ರಾಜಧಾನಿಯಲ್ಲಿ ಕಮಲ ಅರಳಿರುವುದು ಕೇಸರಿ ಪಡೆಗೆ ಮತ್ತಷ್ಟು ಬಲ ಬಂದಂತಾಗಿದೆ
ಅವರು, ಕಳೆದ 10 ವರ್ಷಗಳಿಂದ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರದಲ್ಲಿತ್ತು. ಜನತೆ ಬಹಳ ನಂಬಿಕೆಯಿಟ್ಟು ಆಮ್ ಆದ್ಮಿ ಪಕ್ಷಕ್ಕೆ ಅಧಿಕಾರ ನೀಡಿದ್ದರು. ದೆಹಲಿಯಲ್ಲಿ ಆಡಳಿತ ನಡೆಸಿದ ಮಾಜಿ ಮುಖ್ಯಮಂತ್ರಿ ಹಾಗೂ ಅಬಕಾರಿ ಹಗರಣದಲ್ಲಿ ಸಿಲುಕಿದ್ದ ಅಷ್ಟೂ ಜನ ಸಚಿವರನ್ನು ಸೋಲಿಸುವ ಮೂಲಕ ಜನತೆ ಎಲ್ಲರಿಗೂ ಎಚ್ಚರಿಕೆಯ ಸಂದೇಶವನ್ನು ರವಾನಿಸಿದ್ದಾರೆ. ಸುಳ್ಳು ಹೇಳಿಕೊಂಡು ರಾಜಕಾರಣ ಮಾಡುವ ಎಲ್ಲರಿಗೂ ದೆಹಲಿ ಚುನಾವಣೆ ಒಂದು ಪಾಠವಾಗಿದೆ.
ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಪ್ ಸರ್ಕಾರ ಹಿಂದೆಂದೂ ಕಾಣದಷ್ಟು ಹಗರಣ ನಡೆಸಿ ಜನರ ನಂಬಿಕೆಯನ್ನು ಉಳಿಸಿಕೊಳ್ಳುವಲ್ಲಿ ವಿಫಲವಾಗಿದೆ. ಈ ನಿಟ್ಟಿನಲ್ಲಿ ಜನತೆ ಆಪ್ ಸರ್ಕಾರದ ವಿರುದ್ಧ ಮತ ಚಲಾಯಿಸಿ ಅಭಿವೃದ್ದಿ ಪರವಾದ ಭಾರತೀಯ ಜನತಾ ಪಕ್ಷಕ್ಕೆ ಅಧಿಕಾರ ನೀಡಿ ಆರ್ಶೀವದಿಸಿದ್ದಾರೆ.ಈ ಸಂದರ್ಭದಲ್ಲಿ ಎಂದರು
ಈ ಸಂದರ್ಭದಲ್ಲಿ ಮುದಗಲ್ಲ ಬಬಿಜೆಪಿ ನಗರ ಘಟಕದ ಅಧ್ಯಕ್ಷರಾದ ಕರಿಯಪ್ಪ ಯಾದವ್, ಸಣ್ಣ ಸಿದ್ದಯ್ಯ ಫಕೀರಪ್ಪ ಕುರಿ, ಮಂಡಲ ಪ್ರಧಾನಿ ಕಾರ್ಯದರ್ಶಿಯಾದ ಮಂಜುನಾಥ ನಂದವಾಡಗಿ, ಸಂಚಾಲಕರಾದ ಗದ್ಯಪ್ಪ ಜಕ್ಕೇರಮಡು, ಚಂದಾವಲಿ ಸಾಬ್ ಜಂಗ್ಲಿ, ಮಲ್ಲಿಕಾರ್ಜುನ ಮಾಟೂರು, ನಾಗರಾಜ ತಳವಾರ್,ವೀರಭದ್ರಪ್ಪ ವಿರೂಪಾಕ್ಷಿ ಹೂಗಾರ್, ಹನುಮೇಶ್ ಯಾದವ್,, ಹಾಗೂ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ:- ಮಂಜುನಾಥ ಕುಂಬಾರ