Ad imageAd image

ಲೋಕೋಪಯೋಗಿ ಇಲಾಖೆಯ ವತಿಯಿಂದ ರೂ.1 ಕೋಟಿ 40 ಲಕ್ಷ ವೆಚ್ಚದಲ್ಲಿ ಕಾಮಗಾರಿ

Bharath Vaibhav
ಲೋಕೋಪಯೋಗಿ ಇಲಾಖೆಯ ವತಿಯಿಂದ ರೂ.1 ಕೋಟಿ 40 ಲಕ್ಷ ವೆಚ್ಚದಲ್ಲಿ ಕಾಮಗಾರಿ
WhatsApp Group Join Now
Telegram Group Join Now

ಬಾಣಾವರ : ಹೋಬಳಿ ವ್ಯಾಪ್ತಿಯ ಬಸವರಾಜಪುರದಿಂದ ಮರುಳದೇವರ ಮಠದ ರಸ್ತೆ ಮಾರ್ಗವಾಗಿ ಗರುಡನಗಿರಿ ರಸ್ತೆಗೆ ಸೇರುವ ರಸ್ತೆ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆಯನ್ನು ಶಾಸಕ ಹಾಗೂ ಕರ್ನಾಟಕ ಗೃಹಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ಇಂದು ಬಸವರಾಜಪುರ ಗ್ರಾಮದಲ್ಲಿ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಈ ರಸ್ತೆ ಅನೇಕ ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುತ್ತದೆ, ಈ ಭಾಗದಲ್ಲಿ ಜಮೀನುಗಳಿದ್ದು ರೈತರುಗಳಿಗೆ ಇದು ಅನುಕೂಲವಾಗಲಿದೆ ಎಂದರು. ಗುಣಮಟ್ಟದ ಕಾಮಗಾರಿಯನ್ನು ನಿರ್ವಹಿಸುವಂತೆ ಗುತ್ತಿಗೆದಾರರಿಗೆ ತಾಕೀತು ಮಾಡಿ ಇಂಜಿನಿಯರುಗಳಿಗೆ ಸೂಚನೆ ನೀಡಿದರು.

ಈ ಕಾರ್ಯದಲ್ಲಿ ಮಾಜಿ ಜಿ.ಪಂ.ಉಪಾಧ್ಯಕ್ಷ ಹಾಗೂ ಮುಖಂಡ ಬಿಳಿಚೌಡಯ್ಯ, ಮಾಜಿ ತಾ.ಪಂ.ಅಧ್ಯಕ್ಷೆ ಮಂಜುಳಾಬಾಯಿ, ಮಾಜಿ ಗ್ರಾ.ಪಂ ಅಧ್ಯಕ್ಷ ಕುಬೇರ ಮುಖಂಡರಾದ ಮೋಕ್ಷರಾಜು, ಹರತನಹಳ್ಳಿ ಜಯಣ್ಣ, ಕೊಮ್ಮಾರಘಟ್ಟ ನಾಗರಾಜ ಬ್ಯಾಡರಹಳ್ಳಿ ರಂಗಪ್ಪ, ಅಶೋಕ, ಗುಂಡಣ್ಣ, ಗಂಗಾಧರ ಹಾಗೂ ಗ್ರಾಮಸ್ಥರು ಹಾಜರಿದ್ದರು..

ವರದಿ : ರಾಜು ಅರಸಿಕೆರೆ

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!