Ad imageAd image

ಬೆಂಕಿ ಅವಘಡ: ಕಾರ್ಮಿಕನ ಶವವನ್ನು ಕೈಚೀಲದಲ್ಲಿ ಹಾಕಿ ಕೊಟ್ಟ ಜಿಲ್ಲಾಡಳಿತ

Bharath Vaibhav
ಬೆಂಕಿ ಅವಘಡ: ಕಾರ್ಮಿಕನ ಶವವನ್ನು ಕೈಚೀಲದಲ್ಲಿ ಹಾಕಿ ಕೊಟ್ಟ ಜಿಲ್ಲಾಡಳಿತ
WhatsApp Group Join Now
Telegram Group Join Now

ಬೆಳಗಾವಿ: ತಾಲ್ಲೂಕಿನ ನಾವಗೆ ಗ್ರಾಮದ ಕಾರ್ಖಾನೆಯ ಅಗ್ನಿ ಅವಘಡದಲ್ಲಿ ಮೃತಪಟ್ಟ ಕಾರ್ಮಿಕ ಯಲ್ಲಪ್ಪ ಸಣ್ಣಗೌಡ ಗುಂಡ್ಯಾಗೋಳ (20) ಅವರ ದೇಹದ ಅವಶೇಷಗಳನ್ನು, ಅಧಿಕಾರಿಗಳು ಪ್ಲಾಸ್ಟಿಕ್‌ ಚೀಲದಲ್ಲಿ ಹಾಕಿ ತಂದೆಯ ಕೈಗೆ ಕೊಟ್ಟು ಕಳುಹಿಸಿದರು.

ಸುಟ್ಟುಹೋದ ಮಗನ ದೇಹದ ಅಲ್ಪಸ್ವಲ್ಪ ಅಂಗಾಂಗಗಳನ್ನು ತಂದೆ ಸಣ್ಣಗೌಡ ಅವರು, ಸಂತೆಗೆ ಬಳಸುತ್ತಿದ್ದ ಕೈಚೀಲದಲ್ಲಿ ಹಾಕಿಕೊಂಡು ಮನೆ ಕಡೆಗೆ ಹೊರಟರು.

ದಾರಿಯುದ್ದಕ್ಕೂ ಇನ್ನಿಲ್ಲದಂತೆ ದುಃಖಿಸುತ್ತಿದ್ದ ಅವರ ಪರಿಸ್ಥಿತಿಗೆ ಮರುಗದವರೇ ಇಲ್ಲ.

ಕಾರ್ಖಾನೆಯ ಲಿಫ್ಟ್‌ನಲ್ಲೇ ಸಿಕ್ಕಿ ಸತ್ತುಹೋದ ಯುವಕನ ಶವಕ್ಕೂ ಜಿಲ್ಲಾಡಳಿತ ಕನಿಷ್ಠ ಗೌರವ ನೀಡಲಿಲ್ಲ. ಸ್ಥಳದಲ್ಲಿ ಆಂಬುಲೆನ್ಸ್‌ಗಳಿದ್ದರೂ ಕೈಚೀಲದಲ್ಲಿ ದೇಹದ ಅವಶೇಷಗಳನ್ನು ಹಾಕಿ ಕೊಟ್ಟಿತು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!