Ad imageAd image

ಹೆತ್ತ ಮಗನನ್ನೇ ಸಜೀವವಾಗಿ ಸುಟ್ಟುಹಾಕಿದ ತಂದೆ – ತಾಯಿ

Bharath Vaibhav
ಹೆತ್ತ ಮಗನನ್ನೇ ಸಜೀವವಾಗಿ ಸುಟ್ಟುಹಾಕಿದ ತಂದೆ – ತಾಯಿ
WhatsApp Group Join Now
Telegram Group Join Now

ಬಾಗಲಕೋಟೆ : ರಾಜ್ಯದಲ್ಲಿ ಘೋರ ಕೃತ್ಯವೊಂದು ನಡೆದಿದ್ದು, ಡೀಸೆಲ್ ಸುರಿದು ಹೆತ್ತ ಮಗನನ್ನೇ ಸಜೀವವಾಗಿ ತಂದೆ-ತಾಯಿ ಸುಟ್ಟು ಹಾಕಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.

ಬಾಗಲಕೋಟೆ ಜಿಲ್ಲೆ ಜಮಖಂಡಿಯ ಬಿದರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ದುಶ್ಚಟಗಳ ದಾಸನಾಗಿ, ಸಾಲ ಮಾಡಿಕೊಂಡು, ಆಸ್ತಿಯಲ್ಲಿ ಪಾಲು ಕೇಳಿ, ಮನೆಯವರ ಮೇಲೆ ಹಲ್ಲೆಗೆ ಯತ್ನಿಸಿದ ಮಗನನ್ನು ತಂದೆ-ತಾಯಿ ಹಾಗೂ ಸಹೋದರ ಸೇರಿಕೊಂಡು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಅನೀಲ ಕಾನಟ್ಟಿ (32) ಕೊಲೆಯಾದ ಯುವಕ. ಆತನ ಸಹೋದರ ಬಸವರಾಜ (35), ತಂದೆ ಪರಪ್ಪ (62), ತಾಯಿ ಶಾಂತಾ (55) ಬಂಧಿತರು. ಶುಕ್ರವಾರ ರಾತ್ರಿ ಅನೀಲ ಮನೆಯಲ್ಲಿ ಜಗಳ ಮಾಡಿ, ನಿಮ್ಮನ್ನೆಲ್ಲ ಸಾಯಿಸುತ್ತೇನೆ ಎಂದು ಮುಂದಾದಾಗ ಪೋಷಕರು ಹತ್ಯೆಗೈದಿದ್ದಾರೆ. ಕಣ್ಣಿಗೆ ಕಾರದ ಪುಡಿ ಎರಚಿ, ಹಗ್ಗದಿಂದ ಕುತ್ತಿಗೆಗೆ ಬಿಗಿದು, ಎರಡೂ ಕೈ ಕಟ್ಟಿ, ಹೊರಗೆಳೆದು ತಂದು, ಆತನ ಮೈಮೇಲೆ ಡೀಸೆಲ್ ಸುರಿದು, ಸುಟ್ಟು ಹಾಕಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!