ಗುರುಮಠಕಲ್ : ಸಾರ್ವಜನಿಕರಿಗೆ ನೇರವಾಗಿ ಸೇವೆ ನೀಡುವ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸ್ವಂತ ಕಚೇರಿ ನೀಡಬೇಕು, ಮಹಿಳಾ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸುರಕ್ಷತಾ ಸೌಲಭ್ಯಗಳನ್ನ ನೀಡಬೇಕು, ಗ್ರಾಮ ಆಡಳಿತ ಅಧಿಕಾರಿಗಳು ಕುಟುಂಬದವರೊಂದಿಗೆ ನೆಮ್ಮದಿಯಿಂದ ಜೀವನ ನಡೆಸಲು ಅಂತರ ಜಿಲ್ಲಾ ವರ್ಗಾವಣೆ, ಗ್ರಾಮ ಆಡಳಿತ ಬಡ್ತಿ, ಸರ್ಕಾರದ ಎಲ್ಲಾ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸುವ ಗ್ರಾಮ ಆಡಳಿತ ಅಧಿಕಾರಿಗಳಿಗೆ ಕಾನೂನಿನ ರಕ್ಷಣೆ ನೀಡಬೇಕು,ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ. ಪ್ರತಿಭಟನೆ ನಡೆಸುತ್ತಿದ್ದಾರೆ.
ನಮ್ಮ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ಸೋಮವಾರ ದಿಂದ ಕರೆ ನೀಡಿದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಗುರುಮಠಕಲ್ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿಗಳ ಸಂಘ ಬೆಂಬಲ ನೀಡಿ ಗುರುಮಠಕಲ್ ತಾಲೂಕಿನ ತಹಸೀಲ್ದಾರ್ ಕಛೇರಿ ಆವರಣದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಿ , ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ತಾಲೂಕು ಅಧ್ಯಕ್ಷ ಸಾಯಬಣ್ಣ ಪೂಜಾರಿ ಸುದ್ದಿಗಾರರೊಂದಿಗೆ ಮಾತನಾಡಿ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸುಸಜ್ಜಿತವಾದ ಕಛೇರಿ ಉತ್ತಮ ಗುಣಮಟ್ಟದ ಟೇಬಲ್ ಮತ್ತು ಅಲ್ಮೆರಾ. ಅತ್ಯುತ್ತಮ ಗುಣಮಟ್ಟದ ಮೊಬೈಲ್ ಫೋನ್ ( 12ಜಿಬಿ /256ಜಿಬಿ) ಸಿಯುಜಿ ಸಿಮ್ ಮತ್ತು ಡೇಟಾ, ಗೂಗಲ್ ಕ್ರೋಮ್ ಬುಕ್. ಲ್ಯಾಪ್ ಟಾಪ್, ಪ್ರಿಂಟರ್ ಮತ್ತು ಸ್ಕ್ಯಾನರ್. ಈ ಎಲ್ಲಾ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಅಭಿಪ್ರಾಯ ಪಟ್ಟರು ಸರಕಾರಕ್ಕೆ ಮನವಿ ಮಾಡಿದರು
ಬೇರೆ ಜಿಲ್ಲಾ ವರ್ಗಾವಣೆಯ ಕೆ.ಸಿ.ಎಸ್.ಆರ್ ನಿಯಮ 16ಎ ರ ಉಪಖಂಡ (2) ನ್ನು ಮರುಸ್ಥಾಪಿಸುವ ಬಗ್ಗೆ ಅಥವಾ ಇತರೆ ಎಲ್ಲಾ ಇಲಾಖೆಗಳಲ್ಲಿರುವಂತೆ ಕಂದಾಯ ಇಲಾಖೆಯಲ್ಲಿ ವರ್ಗಾವಣೆಗಾಗಿ ವಿಶೇಷ ಮಾರ್ಗಸೂಚಿಯನ್ನು ರಚಿಸಬೇಕು, ಕಳೆದ ನಾಲ್ಕು ವರ್ಷಗಳಿಂದ ಕಂದಾಯ ಇಲಾಖೆಯಲ್ಲಿ ಪದೋನ್ನತಿ ಹಾಗೂ ವರ್ಗಾವಣೆಗೆ ಸಂಬಂಧಿಸಿದಂತೆ, ಕೆ.ಸಿ.ಎಸ್.ಆರ್ ನಿಯಮ 16 ಎ ರ ಉಪಖಂಡ(2) ವನ್ನು ಹಿಂಪಡೆದಿರುವುದರಿಂದ ನೌಕರರ ಜೀವನದಲ್ಲಿ ಈ ಕೆಳಕಂಡಂತೆ ಹಲವಾರು ಸಮಸ್ಯೆಗಳು ಉಂಟಾಗಿರುತ್ತದೆ, ಆದ್ದರಿಂದ ಈ 16 ಎ ಉಪಖಂಡ(2)ನ್ನು ಮರುಸ್ಥಾಪಿಸುವಂತೆ ಅಥವಾ ಕಂದಾಯ ಇಲಾಖೆಯಲ್ಲಿ ಇತರೆ ಎಲ್ಲಾ ಇಲಾಖೆಗಳಲ್ಲಿ ಮಾಡಿರುವಂತೆ, ವರ್ಗಾವಣೆಯ ಮಾರ್ಗಸೂಚಿಯನ್ನು ರಚಿಸಬೇಕು ಎಂದರು ಹಲವಾರು ಬೇಡಿಕೆಗಳ ಕುರಿತು ಈ ಮೂಲಕ ಒತ್ತಾಯಿಸಿದರು,
ಈ ಸಂದರ್ಭದಲ್ಲಿ .ದೊಡ್ಡ ಬಸವರಾಜ.ವಿಜಯ ಪವಾರ್.ಪಂಪಾಪತಿ.ಶರತಕುಮಾರ.ಗಣೇಶ. ಚಾಂದ ಪಾಶ.ಶಿವುಕುಮಾರ ಅಲಬೂರ.ಅರವಿಂದ.ದಯಾನಂದ ಮರೆಪ್ಪ.ಪ್ರೇಮ ಕುಮಾರ.ಶರಣಪ್ಪ.ಲಾಲಬಾಷ ನೌನಾಥ. ಸುನೀಲ್ ಜಾಧವ್.ರೇಖಾ.ಸೌಮ್ಯ.ಸುನೀತಾ.ಮೇಘಾ ರಾಣಿ ಇನ್ನೀರರು ಭಾಗಿಯಾಗಿದ್ದರು.
ವರದಿ : ರವಿ ಬೂರನೋಳ್