ಹೊಸಪೇಟೆ(ವಿಜಯನಗರ ಜಿಲ್ಲೆ): ಹಾಲಸಾಗರ ಗ್ರಾಮದಲ್ಲಿ ಕರಡಿ ದಾಳಿಯಿಂದ ಕುರಿಗಾಹಿ ಸಾವನ್ನಪ್ಪಿದ್ದಾರೆ. ಇದರಿಂದ ರೊಚ್ಚಿಗೆದ್ದ ಜನ ದೊಣ್ಣೆಗಳಿಂದ ಹೊಡೆದು ಕರಡಿಯನ್ನು ಹತ್ಯೆ ಮಾಡಿದ್ದಾರೆ.
ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹಾಲಸಾಗರ ಗ್ರಾಮದಲ್ಲಿ ಘಟನೆ ನಡೆದಿದ್ದು, ಕರಡಿ ದಾಳಿಯಿಂದ ಕುರಿಗಾಹಿ ಓಬಣ್ಣ(35) ಮೃತಪಟ್ಟಿದ್ದಾರೆ.ಗುಡೇಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.




