Ad imageAd image

ಡಿ ಗ್ಯಾಂಗ್ ನ ಸ್ಥಳ ಮಹಜರಿಗೆ ಕರೆದೊಯ್ದು ಪೊಲೀಸರು

Bharath Vaibhav
WhatsApp Group Join Now
Telegram Group Join Now

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾದ ಆರೋಪಿ, ನಟ ದರ್ಶನ್ & ಗ್ಯಾಂಗ್ ನ್ನು ಪೊಲೀಸರು ಇಂದು ಸ್ಥಳ ಮಹಜರಿಗೆ ಕರೆದೊಯ್ದಿದ್ದಾರೆ.

ಕಾಮಾಕ್ಷಿಪಾಳ್ಯದ ರಾಜಕಾಲುವೆ ಬಳಿ ನಟ ದರ್ಶನ್ & ಗ್ಯಾಂಗ್ ನ್ನು ಸ್ಥಳ ಮಹಜರಿಗೆ ಕರೆದೊಯ್ದು ಮಹಜರು ಮಾಡಿ ವಾಪಸ್ ಕರೆದುಕೊಂಡು ಬಂದಿದ್ದಾರೆ.

ಪ್ರಕರಣದ ಎ 1 ಆರೋಪಿ ಪವಿತ್ರಾ ಹೊರತುಪಡಿಸಿ ಉಳಿದ ಆರೋಪಿಗಳನ್ನು ಪೊಲೀಸರು ಕರೆದೊಯ್ದಿದ್ದರು. ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ದರ್ಶನ್ & ಗ್ಯಾಂಗ್ ಕೊಲೆ ಮಾಡಿ ರಾಜಕಾಲುವೆಗೆ ಎಸೆದಿತ್ತು.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 13 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಇನ್ನೊಂದೆಡೆ ಕೊಲೆಗೆ ಬಳಸಿದ್ದ ಎರಡು ಕಾರುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!