ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯವನ್ನು (ಬಜೆಟ್) ಅನುಮೋದಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಬರುವ ಶುಕ್ರವಾರ, ಅಂದರೆ ಮಾರ್ಚ್ 06, 2026ರಂದು ಬೆಳಿಗ್ಗೆ 9:45ಕ್ಕೆ ಸಚಿವ ಸಂಪುಟದ ವಿಶೇಷ ಸಭೆಯನ್ನು ಕರೆಯಲಾಗಿದೆ.
ಬೆಂಗಳೂರಿನ ವಿಧಾನ ಸೌಧದ ಮೂರನೇ ಮಹಡಿಯಲ್ಲಿರುವ ಸಚಿವ ಸಂಪುಟ ಸಭಾಮಂದಿರದಲ್ಲಿ ಈ ಮಹತ್ವದ ಸಭೆ ನಡೆಯಲಿದೆ.
ಈ ಕುರಿತು ಸರ್ಕಾರದ ಅಪರ ಕಾರ್ಯದರ್ಶಿ (ಸಚಿವ ಸಂಪುಟ) ಆರ್. ಚಂದ್ರಶೇಖರ್ ಅವರು ಮಂಗಳವಾರ ಅಧಿಕೃತ ಸೂಚನಾ ಪತ್ರವನ್ನು ಹೊರಡಿಸಿದ್ದಾರೆ.
ಬಜೆಟ್ ಮೇಲೆ ಕುತೂಹಲ
ರಾಜ್ಯದ ಆರ್ಥಿಕ ಅಭಿವೃದ್ಧಿ ಹಾಗೂ ಮುಂಬರುವ ವರ್ಷದ ಯೋಜನೆಗಳ ದೃಷ್ಟಿಯಿಂದ ಈ ಬಜೆಟ್ ಅತ್ಯಂತ ಮಹತ್ವದ್ದಾಗಿದೆ.
ಸಭೆಯಲ್ಲಿ ಮುಖ್ಯಮಂತ್ರಿಗಳು ಮಂಡಿಸಲಿರುವ ಆಯವ್ಯಯದ ಪ್ರಸ್ತಾವನೆಗಳಿಗೆ ಸಚಿವ ಸಂಪುಟವು ಅಧಿಕೃತ ಮುದ್ರೆ ಒತ್ತಲಿದೆ. ಈ ಸಭೆಗೆ ರಾಜ್ಯದ ಎಲ್ಲಾ ಸಚಿವರು ಕಡ್ಡಾಯವಾಗಿ ಹಾಜರಿ ಸೂಚಿಸಲಾಗಿದೆ.
ಈ ವಿಶೇಷ ಸಭೆಯ ಹಿನ್ನೆಲೆಯಲ್ಲಿ ವಿಧಾನ ಸೌಧದ ಭದ್ರತೆ ಹಾಗೂ ಆಡಳಿತಾತ್ಮಕ ಸಿದ್ಧತೆಗಳಿಗಾಗಿ ವಿವಿಧ ಇಲಾಖೆಗಳಿಗೆ ಮಾಹಿತಿಯನ್ನು ರವಾನಿಸಲಾಗಿದೆ. ಶುಕ್ರವಾರ ಬೆಳಿಗ್ಗೆ ಬಜೆಟ್ ಅನುಮೋದನೆಗೊಂಡ ಬೆನ್ನಲ್ಲೇ, ಸರ್ಕಾರವು ತನ್ನ ಮುಂದಿನ ಆರ್ಥಿಕ ಗುರಿಗಳನ್ನು ಸದನದ ಮುಂದಿಡಲಿದೆ.




