ಬೆಂಗಳೂರು: -ಬೆಂಗಳೂರಿನ ವೈಯಾಲಿಕಾವಲ್ನಲ್ಲಿರುವ ತಿರುಪತಿ ತಿಮ್ಮಪ್ಪನ ದೇವಸ್ಥಾನದಲ್ಲಿ ಲಡ್ಡು ಪ್ರಸಾದ ವಿತರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ, ಏಕೆಂದರೆ ಬೆಂಗಳೂರಿಗೆ ಬರುತ್ತಿದ್ದ ಲಡ್ಡು ಪ್ರಸಾದವನ್ನು ಟಿಟಿಡಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ ಹೌದು, ತಿರುಪತಿಯಲ್ಲಿ ಬ್ರಹ್ಮೋತ್ಸವ ಹಿನ್ನೆಲೆಯಲ್ಲಿ ತಿಮ್ಮಪನ ಸನ್ನಿಧಿಯಲ್ಲಿ ಭಕ್ತರ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದೆ, ಇದರಿಂದ ಬೆಟ್ಟದಿಂದ ಲಡ್ಡು ಪೊರೈಸುವ ವಾಹನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.
ಹೀಗಾಗಿ ಅಕ್ಟೋಬರ್ 12ರವರೆಗೆ ಬೆಂಗಳೂರಿನ ತಿರುಪತಿ ದೇವಸ್ಥಾನಕ್ಕೆ ಟಿಟಿಡಿ ಆಡಳಿತ ಮಂಡಳಿ ಲಡ್ಡು ಸರಬರಾಜು ಮಾಡುವುದಿಲ್ಲ ತಿರುಪತಿ ಲಡ್ಡು ವಿವಾದ ತಿರುಪತಿ ದೇವಸ್ಥಾನದಲ್ಲಿ ನೀಡಲಾಗುವ ಪ್ರಸಾದವಾದ ಲಡ್ಡು ತಯಾರಿಕೆಗೆ ಕಳಪೆ ಗುಣಮಟ್ಟದ ತುಪ್ಪ ಬಳಸಲಾಗಿದೆ ಆರ್ ತುಪ್ಪದಲ್ಲಿ ಪ್ರಾಣಿಯ ಕೊಬ್ಬು, ಮೀನಿನ ಎಣ್ಣೆ ಮತ್ತಿತರ ಎಣ್ಣೆಗಳ ಅಂಶ ಇದ್ದುದು ಲ್ಯಾಬ್ ವರದಿಯಲ್ಲಿ ಪತ್ತೆಯಾಗಿತ್ತು ಈ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು ಹಿಂದೂಗಳ ಭಾವನೆಗೆಧಕ್ಕೆ ಉಂಟು ಮಾಡಿದೆ.
ವರದಿ: ಅಯ್ಯಣ್ಣ ಮಾಸ್ಟರ್




