ಚಿತ್ರದುರ್ಗ : ಬೆಂಗಳೂರಿನಲ್ಲಿ ಗುತ್ತಿಗೆದಾರ ಅಂಬಿಕಾ ಪತಿ ಹಾಗೂ ಬಿಲ್ಡರ್ ಸಂತೋಷ್ ಮನೆಯಲ್ಲಿ ಐಟಿ ದಾಳಿ ನಡೆಸಿ ಕೋಟ್ಯಂತರ ರೂಪಾಯಿ ನಗದು ಹಣವನ್ನು ವಶಪಡಿಸಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯು ಕಾಂಗ್ರೆಸ್ ಮೇಲೆ ವಾಗ್ದಾಳಿ ನಡೆಸಿದ್ದು ಎಲ್ಲವೂ ಕಾಂಗ್ರೆಸ್ ಹಣ ಎಂದು ಹೇಳಿದೆ.
ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದಕ್ಕೆ ಸಚಿವ ಆರ್ಬಿ ತಿಮ್ಮಾಪುರ್ ಅವರು ಪ್ರತಿಕ್ರಿಯೆ ನೀಡಿದ್ದು, ಪತ್ತೆಯಾದ ಹಣ ಬಿಜೆಪಿಗೆ ಸೇರಿದೆ ಎಂದು ನನಗೂ ಮಾಹಿತಿ ಇದೆ ಎಂದು ತಿರುಗೇಟು ನೀಡಿದ್ದಾರೆ.
ಬಿಜೆಪಿ ನಾಯಕರಿಗೆ ಮಾಡಲು ಬೇರೆ ಕೆಲಸ ಇಲ್ಲ. ಗುತ್ತಿಗೆದಾರನ ಮನೆಯಲ್ಲಿ ಹಣ ಸಿಕ್ಕಿದ್ದು ಕಾಂಗ್ರೆಸ್ಸಿರದ್ದು ಅಂತಾರೆ, ಬಿಜೆಪಿಗೆ ಸೇರಿದ ಹಣ ಯಾಕೆ ಇರಬಾರದು ಅವರೇನು ಸತ್ಯಹರಿಶ್ಚಂದ್ರರ? ಎಂದು ವಾಗ್ದಾಳಿ ನಡೆಸಿದರು.
ಅಬಕಾರಿ ಇಲಾಖೆಯಲ್ಲಿ ಬಹಳ ದಿನದಿಂದ ಭ್ರಷ್ಟಾಚಾರ ನಡೆಯುತ್ತಿದೆ. ಭ್ರಷ್ಟಾಚಾರ ತಡೆಯಲು ಮಹತ್ವದ ಹೆಜ್ಜೆ ಹಾಕುತ್ತಿದ್ದೇವೆ.ಬಾರ್ ರಿಲೇವಲ್ ಕೂಡ ಎರಡು ವರ್ಷಕ್ಕೆ ತೀರ್ಮಾನ ಮಾಡಿದ್ದೇವೆ.ನಾವು ಹೊಸ ಮಧ್ಯದ ಅಂಗಡಿ ತೆರೆಯಲ್ಲ ಎಂದು ಚಿತ್ರದುರ್ಗದಲ್ಲಿ ಅಬಕಾರಿ ಸಚಿವ ಆರ್.ಬಿ ತಿಮ್ಮಾಪುರ ಹೇಳಿದರು.