Ad imageAd image

ಅಧಿಕಾರಕ್ಕಾಗಿ ನಮ್ಮ ಮನೆ ಬಾಗಿಲಿಗೆ ಬಂದಿದ್ದು ಇದೇ ಕಾಂಗ್ರೆಸ್ಸಿಗರು : ಕುಮಾರಸ್ವಾಮಿ 

Bharath Vaibhav
ಅಧಿಕಾರಕ್ಕಾಗಿ ನಮ್ಮ ಮನೆ ಬಾಗಿಲಿಗೆ ಬಂದಿದ್ದು ಇದೇ ಕಾಂಗ್ರೆಸ್ಸಿಗರು : ಕುಮಾರಸ್ವಾಮಿ 
HDK
WhatsApp Group Join Now
Telegram Group Join Now

ಬೆಂಗಳೂರು: ಅಧಿಕಾರಕ್ಕಾಗಿ ನಮ್ಮ ಮನೆ ಬಾಗಿಲಿಗೆ ಬಂದಿದ್ದು ಇದೇ ಕಾಂಗ್ರೆಸ್ಸಿಗರು, ಅದಕ್ಕೂ ಮೊದಲು ನಾನು ಬಿಜೆಪಿ ಜತೆ ಸೇರಿ ಸರ್ಕಾರ ರಚನೆ ಮಾಡಿದ್ದಿದ್ದು ಅವರಿಗೆ ಗೊತ್ತಿರಲಿಲ್ಲವೇ? ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕಿಡಿಕಾರಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವರು; ಜೆಡಿಎಸ್ ಬಗ್ಗೆ ಲಘುವಾಗಿ ಮಾತನಾಡುತ್ತಿರುವ ಸಚಿವ ಪ್ರಿಯಾಂಕ ಖರ್ಗೆ ಅವರನ್ನು ತರಾಟೆಗೆ ತೆಗೆದುಕೊಂಡರಲ್ಲದೆ, ಈ ಕ್ಷುಲ್ಲಕ ರಾಜಕೀಯ ಬಿಟ್ಟು ಕಲಬುರಗಿ ಜಿಲ್ಲೆಯಲ್ಲಿ ಆಗಿರುವ ನೆರೆ ಅನಾಹುತವನ್ನು ಸರಿ ಮಾಡಿ ಎಂದು ಕಿವಿಮಾತು ಹೇಳಿದರು.

ಅಧಿಕಾರಕ್ಕಾಗಿ ಜೆಡಿಎಸ್ ಕೇಸರಿಕರಣವಾಗಿದೆ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ತಿರುಗೇಟು ಕೊಟ್ಟ ಸಚಿವರು; ಅಧಿಕಾರಕ್ಕಾಗಿ 2018ರಲ್ಲಿ ನಮ್ಮ ಮನೆ ಬಾಗಿಲಿಗೆ ಬಂದಿದ್ದು ಇದೇ ಕಾಂಗ್ರೆಸ್. ಅವತ್ತು ಏನೇನು ನಡೆಯಿತು ಎನ್ನುವುದನ್ನು ಅವರು ತಮ್ಮ ತಂದೆಯನ್ನು ಕೇಳಿ ತಿಳಿದುಕೊಳ್ಳಲಿ. ಬೆಂಗಳೂರಿನಲ್ಲಿ ರಾಜಕೀಯ ಮಾಡುವ ಬದಲು ತಮ್ಮ ಜಿಲ್ಲೆಯಲ್ಲಿ ಏನಾಗಿದೆ ಎಂಬ ಬಗ್ಗೆ ಗಮನ ಹರಿಸಲಿ ಎಂದು ಸಲಹೆ ಮಾಡಿದರು.

ಕಾಂಗ್ರೆಸ್ ನವರು ಮಾತೆತ್ತಿದರೆ ತಾಜ್ ಹೋಟೆಲ್ ನಲ್ಲಿ ಇದ್ದೆ ಅಂತಾರೆ. ನಾನು ತಾಜ್ ಹೊಟೇಲಿನಲ್ಲಿ ಮಲಗಿದ್ದರೆ ರೈತರ 25 ಸಾವಿರ ಕೋಟಿ ಸಾಲಮನ್ನಾ ಮಾಡೋಕೆ ಆಗುತ್ತಿತ್ತಾ? ಎಂದು ಸಚಿವರು ಖಾರವಾಗಿ ಪ್ರಶ್ನಿಸಿದರು.

ಕಾಂಗ್ರೆಸ್ ಶಾಸಕರಿಗೆ ‌ನಾನು ಸಿಎಂ ಅಗಿದ್ದಾಗ ಅಭಿವೃದ್ದಿಗಾಗಿ 19 ಸಾವಿರ ಕೋಟಿ ಅನುದಾನವನ್ನು ಒಂದೇ ವರ್ಷದಲ್ಲಿ ಕೊಟ್ಟಿದ್ದೆ. ಇವತ್ತು ಸಿದ್ದರಾಮಯ್ಯ ಅವರು ಕುಮಾರಸ್ವಾಮಿ ಇದ್ದಾಗ ಏನ್ ಕೊಟ್ರು ಅಂತ ಚರ್ಚೆ ಮಾಡ್ತಾರೆ. ದಾಖಲೆ, ಅಂಕಿ ಅಂಶಗಳು ಅವರ ಬಳಿಯೇ ಇವೆ. ಮೊದಲು ನೋಡಲಿ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!