Ad imageAd image

ಅಥಣಿಯಲ್ಲಿ ಮಕ್ಕಳ ಕಳ್ಳತನ ಪ್ರಕರಣ : ಮೂವರು ಆರೋಪಿಗಳು ಅರೆಸ್ಟ್, ಓರ್ವನಿಗೆ ಗುಂಡೇಟು 

Bharath Vaibhav
ಅಥಣಿಯಲ್ಲಿ ಮಕ್ಕಳ ಕಳ್ಳತನ ಪ್ರಕರಣ : ಮೂವರು ಆರೋಪಿಗಳು ಅರೆಸ್ಟ್, ಓರ್ವನಿಗೆ ಗುಂಡೇಟು 
WhatsApp Group Join Now
Telegram Group Join Now

ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಹಾಡಹಗಲೇ ಮನೆಗೆ ನುಗ್ಗಿ ಇಬ್ಬರು ಮಕ್ಕಳನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಥಣಿ ಠಾಣೆ ಪೊಲೀಸರು ಇದೀಗ ಇಬ್ಬರು ಮಕ್ಕಳನ್ನು ರಕ್ಷಿಸಿದ್ದು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದೆ.ಹಾಡಹಗಲೇ ಇಬ್ಬರು ಮಕ್ಕಳನ್ನು ಅಪಹರಿಸಿದ್ದ ಆರೋಪಿಗಳ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದು, ಈ ವೇಳೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಮಹಾರಾಷ್ಟ್ರದ ಕೊಲ್ಲಾಪುರ ಮೂಲದ ಸಾಂಬಾ ಕಾಂಬಳೆ, ಬೆಳಗಾವಿ ಜಿಲ್ಲೆ ಚಿಕ್ಕೋಡಿ ಮೂಲದ ರವಿಕಿರಣ್ ಕಮಲಾಕರ್, ಬಿಹಾರ ಮೂಲದ ಶಾರುಖ್ ಶೇಕ್ ಬಂಧಿತ ಆರೋಪಿಗಳು.

ಬಂಧನದ ವೇಳೆ ಪಿಎಸ್‌ಐ ಮತ್ತು ಸಿಬ್ಬಂದಿ ಮೇಲೆ ಆರೋಪಿ ಸಾಂಬಾ ರಾವ್ ಕಲ್ಲು ತೂರಿದ್ದಾನೆ. ಈ ವೇಳೆ ಆರೋಪಿ ಕಾಲಿಗೆ ಫೈರಿಂಗ್ ಮಾಡಲಾಗಿದೆ. ಆತ್ಮ ರಕ್ಷಣೆಗಾಗಿ ಸಾಂಬಾ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಗಾಯಾಳು ಪೊಲೀಸರು ಮತ್ತು ಆರೋಪಿಯನ್ನು ಅಥಣಿ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.

ಆರೋಪಿಗಳ ಬಳಿ ಮಕ್ಕಳ ತಂದೆ ವಿಜಯ ದೇಸಾಯಿ ಹಣ ಡಬಲ್ ಮಾಡಿಕೊಡುವುದಾಗಿ ಕೋಟ್ಯಂತರ ರೂಪಾಯಿ ಪಡೆದುಕೊಂಡಿದ್ದ. ಆರೋಪಿಗಳಿಗೆ ಹಣ ವಾಪಸ್ ಕೊಡದಿದ್ದಕ್ಕೆ ನಿನ್ನೆ ಮಧ್ಯಾಹ್ನ ಮನೆಗೆ ನುಗ್ಗಿ ವಿಜಯ್ ದೇಸಾಯಿ ಇಬ್ಬರು ಮಕ್ಕಳಾದ ಸ್ವಸ್ತಿ ದೇಸಾಯಿ (4) ಹಾಗೂ ವ್ಯೋಮ ದೇಸಾಯಿ (3)ರನ್ನು ಅಪಹರಣ ಮಾಡಲಾಗಿತ್ತು.

ಬಳಿಕ ವಿಜಯ್ ದೇಸಾಯಿ ಅಥಣಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಇದೀಗ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!