Ad imageAd image

ಅಯೋಧ್ಯೆ ಬಳಿ ಭೀಕರ ಅಪಘಾತ : ಕಲಬುರಗಿ ಮೂಲದ ಮೂವರು ಭಕ್ತರು ಸಾವು

Bharath Vaibhav
ACCIDENT
WhatsApp Group Join Now
Telegram Group Join Now

ಲಖನೌ: ಲಾರಿ ಹಾಗೂ ಟಿಟಿ ವಾಹನದ ನಡುವೆ ಅಯೋಧ್ಯೆ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕಲಬುರಗಿ ಮೂಲದ ಮೂವರು ಭಕ್ತರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಶಿವರಾಜ್, ಕಾಶಿನಾಥ್ ಹಾಗೂ ತಂಗೆಮ್ಮ ಮೃತ ದುರ್ದೈವಿಗಳು. ಅಪಘಾತದಲ್ಲಿ ಟಿಟಿಯಲ್ಲಿದ್ದ ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಅಯೋಧ್ಯೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಲಬುರಗಿ ಮೂಲದ ಒಂದೇ ಕುಟುಂಬದ 22 ಜನರು ಕಾಶಿ ಹಾಗೂ ಅಯೋಧ್ಯೆ ಯಾತ್ರೆಗೆ ತೆರಳಿದ್ದರು. ಕಾಶಿ ವಿಶ್ವನಾಥನ ದರ್ಶನ ಪಡೆದ ಬಳಿಕ ಟಿಟಿಯಲ್ಲಿ ಕಾಶಿಯಿಂದ ಅಯೋಧ್ಯೆಗೆ ತೆರಳುತ್ತಿದ್ದರು. ಈ ವೇಳೆ ತಡರಾತ್ರಿ ಅಯೋಧ್ಯೆ ಬಳಿ ಟಿಟಿ ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!