ಮೈಸೂರು : ರಾಜ್ಯದಲ್ಲಿ ಘೋರ ದುರಂತ ಸಂಭವಿಸಿದ್ದು, ಹಬ್ಬಕ್ಕೆ ಹಸು ತೊಳೆಯಲು ಕೆರೆಗೆ ಹೋಗಿದ್ದ ಮೂವರು ನೀರುಪಾಲಾದ ಘಟನೆ ಬೆಳಕಿಗೆ ಬಂದಿದೆ.
ಮೈಸೂರು ಜಿಲ್ಲೆಯ ನಂಜಗೂಡಿನ ಕಾಮಳ್ಳಿಯಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಮುದ್ದೇಗೌಡ ಬಸವೇಗೌಡ, ವಿನೋದ್ ಎಂದು ಗುರುತಿಸಲಾಗಿದೆ.
ಯುಗಾದಿ ಹಬ್ಬದ ಹಿನ್ನೆಲೆ ಹಸು ತೊಳೆಯಲು ಮೂವರು ಕೆರೆಗೆ ಇಳಿದಿದ್ದರು.ಆದರೆ ಮೂವರು ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಒಬ್ಬರನ್ನೊಬ್ಬರು ಕಾಪಾಡಲು ಹೋಗಿ ಈ ದುರ್ಘಟನೆ ಸಂಭವಿಸಿರಬಹುದೆಂದು ಶಂಕಿಸಲಾಗಿದೆ.