Ad imageAd image

ಇಂದು ಸಿಎಂ ತವರು ಜಿಲ್ಲೆಯಲ್ಲಿ ಬೃಹತ್ ಸಾಧನಾ ಸಮಾವೇಶ 

Bharath Vaibhav
ಇಂದು ಸಿಎಂ ತವರು ಜಿಲ್ಲೆಯಲ್ಲಿ ಬೃಹತ್ ಸಾಧನಾ ಸಮಾವೇಶ 
siddaramaiah
WhatsApp Group Join Now
Telegram Group Join Now

ಮೈಸೂರು: ಜಿಲ್ಲೆಯಲ್ಲಿ ಇಂದು ರಾಜ್ಯ ಸರ್ಕಾರದ ಸಾಧನಾ ಸಮಾವೇಶವನ್ನು ನಿಗದಿಪಡಿಸಲಾಗಿದೆ. ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿದೆ.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ರಾಜ್ಯ ಸರ್ಕಾರದಿಂದ ಬೃಹತ್ ಸಾಧನಾ ಸಾಮಾವೇಶವನ್ನು ಆಯೋಜಿಸಲಾಗಿದೆ.ಈ ಸಂದರ್ಭದಲ್ಲಿ 2,600 ಕೋಟಿ ವೆಚ್ಚದ ಕಾಮಗಾರಿಗೆ ಗುದ್ದಲಿ ಪೂಜೆ ಮತ್ತು ಲೋಕಾರ್ಪಣೆಯನ್ನು ಸಿಎಂ ಸಿದ್ಧರಾಮಯ್ಯ ನೆರವೇರಿಸಲಿದ್ದಾರೆ.

ಇಂದಿನ ಸಾಧನಾ ಸಮಾವೇಶದ ಮೂಲಕ ಹಳೇ ಮೈಸೂರು ಭಾಗದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದಿಂದ ಶಕ್ತಿ ಪ್ರದರ್ಶನ ನಡೆಸಲಾಗುತ್ತಿದೆ. ಈ ಸಮಾವೇಶದ ಜವಾಬ್ದಾರಿಯನ್ನು ಸಿಎಂ ಆಪ್ತ ಮತ್ತು ಸಚಿವ ಡಾ.ಹೆಚ್.ಸಿ ಮಹಾದೇವಪ್ಪ ಅವರಿಗೆ ನೀಡಲಾಗಿದೆ.

ಮೈಸೂರಿನ ಸಾಧನಾ ಸಮಾವೇಶಕ್ಕೆ ಈಗಾಗಲೇ ಮೈಸೂರು, ಚಾಮರಾಜನಗರ ಜಿಲ್ಲೆ ಶಾಸಕರ ಜೊತೆ ಸಭೆ ನಡೆಸಲಾಗಿದೆ. ಸರ್ಕಾರದ ಸಾಧನಾ ಸಮಾವೇಶಕ್ಕೆ ಹೆಚ್ಚಿನ ಜನರನ್ನು ಕರೆತರಲು ಪ್ಲಾನ್ ಕೂಡ ಮಾಡಲಾಗಿದೆ. 1 ಲಕ್ಷಕ್ಕೂ ಹೆಚ್ಚು ಜನರನ್ನು ಸೇರಿಸುವ ಸಾಧ್ಯತೆ ಇದೆ.

 

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!