Ad imageAd image

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : 34 ಐಪಿಎಸ್ ಅಧಿಕಾರಿಗಳ ವರ್ಗಾವಣೆ

Bharath Vaibhav
ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : 34 ಐಪಿಎಸ್ ಅಧಿಕಾರಿಗಳ ವರ್ಗಾವಣೆ
vidhana soudha
WhatsApp Group Join Now
Telegram Group Join Now

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಲಾಗಿದೆ. ಮತ್ತೆ 34 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.

ಈ ಸಂಬಂಧ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದ್ದು, ಬೆಂಗಳೂರು ಕೇಂದ್ರ ವಿಭಾಗ ಡಿಸಿಪಿಯಾಗಿ ಅಕ್ಷಯ್ ಮಚೀಂದ್ರ ಸೇರಿದಂತೆ 34 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ವರ್ಗಾವಣೆಗೊಂಡ ಐಪಿಎಸ್ ಅಧಿಕಾರಿಗಳ ಪಟ್ಟಿ ಹೀಗಿದೆ

ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಸಂಚಾರ ಅನೂಪ್ ಶೆಟ್ಟಿ

ಬೆಂಗಳೂರು ಲೋಕಾಯುಕ್ತ ಎಸ್ಪಿಯಾಗಿ ಶಿವಪ್ರಕಾಶ್ ದೇವರಾಜು

ಬೆಂಗಳೂರು ಉತ್ತರ ಸಂಚಾರ ವಿಭಾಗದ ಡಿಸಿಪಿಯಾಗಿ ಜಯಪ್ರಕಾಶ್

ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಡಿಸಿಪಿಯಾಗಿ ಎಂ. ನಾರಾಯಣ್

ಬೆಂಗಳೂರು ಆಗ್ನೇಯ ವಿಭಾಗ ಡಿಸಿಪಿಯಾಗಿ ಅನಿತಾ ಬಿ. ಹದ್ದಣ್ಣನವರ್

ಕೇಂದ್ರ ಅಪರಾಧ ವಿಭಾಗದ ಜಂಟಿ ಪೋಲಿಸ್ ಆಯುಕ್ತರಾಗಿ ಅಜಯ್ ಹಿಲೋರಿ

ವೈಟ್ಫೀಲ್ಡ್ ವಿಭಾಗದ ಡಿಸಿಪಿಯಾಗಿ ಪರಶುರಾಮ್

ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತರಾಗಿ ಕಾರ್ತಿಕ್ ರೆಡ್ಡಿ

ಸಿಐಡಿ ವಿಭಾಗದ ಪೊಲೀಸ್ ಅಧಿಕಾರಿಯಾಗಿ ಸೈದಲು ಅಡಾವತ್

ಬೆಂಗಳೂರು ಉತ್ತರ ವಿಭಾಗದ ಡಿಸಿಪಿಯಾಗಿ ಬಾಬಾ ಸಾಬ್ ನ್ಯಾಮಗೌಡ

ಬೆಂಗಳೂರು ವಾಯುವ್ಯ ವಿಭಾಗ ಡಿಸಿಪಿಯಾಗಿ ನಾಗೇಶ್

ಬೆಂಗಳೂರು ಸಿಸಿಬಿ ವಿಭಾಗದ ಡಿಸಿಪಿಯಾಗಿ ಶ್ರೀಹರಿ ಬಾಬು

ಸಿಎಆರ್ ಹೆಡ್ ಕ್ವಾಟರ್ಸ್ ಡಿಸಿಪಿಯಾಗಿ ಸೌಮ್ಯ ಲತಾ

ನೇಮಕಾತಿ ವಿಭಾಗ ಡಿಐಜಿಯಾಗಿ ಎಂ.ಎನ್. ಅನುಚೇತ್ ಸೇರಿದಂತೆ 34 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!