Ad imageAd image

ಸವದತ್ತಿ ಯಲ್ಲಮ್ಮ ಗುಡ್ಡದ ಅಭಿವೃದ್ಧಿಗೆ ಟಿಟಿಡಿ ಮಾದರಿ ಯೋಜನೆ: ಸಚಿವ ಪಾಟೀಲ್

Bharath Vaibhav
ಸವದತ್ತಿ ಯಲ್ಲಮ್ಮ ಗುಡ್ಡದ ಅಭಿವೃದ್ಧಿಗೆ ಟಿಟಿಡಿ ಮಾದರಿ ಯೋಜನೆ: ಸಚಿವ ಪಾಟೀಲ್
WhatsApp Group Join Now
Telegram Group Join Now

ಬೆಳಗಾವಿ: ಪವಿತ್ರ ಯಲ್ಲಮ್ಮನ ಗುಡದ ಅಭಿವೃದ್ಧಿಗೆ ಟಿಟಿಡಿ ಮಾದರಿಯಲ್ಲಿ ಅಭಿವೃದ್ಧಿಯನ್ನು ಮಾದರಿಯಾಗಿಟ್ಟುಕೊಂಡು ಯೋಜನೆ ರೂಪಿಸಲಾಗುವುದು ಎಂದು ಪ್ರವಾಸೋದ್ಯಮ ಇಲಾಖೆಯ ಸಚಿವ ಎಚ್.ಕೆ.ಪಾಟೀಲ್‌ ತಿಳಿಸಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಈ ಬಾರಿ ಭರತ ಹುಣ್ಣಿಮೆ ವೇಳೆ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ಜಿಲ್ಲಾಡಳಿತ ಜನಸಂದಣಿ ನಿರ್ವಹಣೆ, ಪಾರ್ಕಿಂಗ್, ಶೌಚಾಲಯ, ಎಲ್.ಇ.ಡಿ. ಸ್ಕಿನ್ ಅಳವಡಿಕೆ ಸೇರಿ ಕಾಮಗಾರಿ ಆರಂಭ ಮಾಡಲಾಗಿದೆ. ದಾಸೋಹ ಭವನ ಮತ್ತು ಮೇವು ದಾಸೋಹ ಭವನ ನಿರ್ಮಾಣಕ್ಕೆ ಒಂದು ತಿಂಗಳಿನಲ್ಲಿ ಶಂಕುಸ್ಥಾಪನೆ ಮಾಡಲು ಪ್ರಯತ್ನಿಸಲಾಗುತ್ತಿದೆ ಎಂದರು. ಸವದತ್ತಿ ಅಭಿವೃದ್ಧಿ ಮಂಡಳಿ ಪ್ರಗತಿ ಪರಿಶೀಲನೆ ನಡೆಸಿ, ಸಣ್ಣವುಟ್ಟ ಕಾನೂನಾತ್ಮಕ ಸಮಸ್ಯೆಗಳನ್ನು ಜಿಲ್ಲಾಡಳಿತ ಬಗೆಹರಿಸಿದೆ. ಫೆ.12 ರಂದು ಭರತ ಹುಣ್ಣಿಮೆಗೆ ಸಕಲ ವ್ಯವಸ್ಥೆ ಮಾಡಲಾಗಿದೆ. ಕೇಂದ್ರದಿಂದ ನೂರು ಕೋಟಿ ಮಂಜೂರಾಗಿದ್ದು, ಇದು ಮಾತ್ರವಲ್ಲದೇ 20 ಕೋಟಿ ಪ್ರಸಾದ ಯೋಜನೆಯಡಿ ಮಂಜೂರಾಗಿದೆ. ಇದಲ್ಲದೇ ರಾಜ್ಯ ಸರ್ಕಾರದಿಂದ ಕೂಡ ಸಾಕಷ್ಟು ಅನುದಾನ ನೀಡಲಾಗುತ್ತಿದೆ ಎಂದು ತಿಳಿಸಿದರು.

ವಸತಿ ಗೃಹ, ದಾಸೋಹ ಭವನ, ಮೂಲಸೌಕರ್ಯಗಳನ್ನು ಒಳಗೊಂಡ ಮಾಸ್ಟರ್ ಪ್ಲಾನ್ ಬಹುತೇಕ ಸಿದ್ಧಗೊಂಡಿದೆ. ವೆಬ್ ಸೈಟ್ ನಲ್ಲೂ ಪ್ಲಾನ್ ಪ್ರಕಟಿಸಿ ಸಾರ್ವಜನಿಕರಿಂದ ಸಲಹೆಗಳನ್ನು ಸ್ವೀಕರಿಸಲಾಗುವುದು. ದಾಸೋಹ ಭವನ ನಿರ್ಮಾಣದ ನಂತರ ದಾಸೋಹ ಆರಂಭಿಸಲಾಗುವುದು. ಸವದತ್ತಿ ಗುಡ್ಡದಲ್ಲಿ ಬಯಲು ಶೌಚಾಲಯ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಶೌಚಾಲಯ ಸೇರಿದಂತೆ ಅಗತ್ಯ ಮೂಲಸೌಕರ್ಯ ಒದಗಿಸಲಾಗುವುದು
ಎಂದರು.

WhatsApp Group Join Now
Telegram Group Join Now
Share This Article
error: Content is protected !!