Ad imageAd image

ಭೂತರಾಮನಹಟ್ಟಿ ಕಿರುಮೃಗಾಲಯದಲ್ಲಿ 31 ಕೃಷ್ಣಮೃಗಗಳ ಪ್ರಕರಣಕ್ಕೆ ಟ್ವಿಸ್ಟ್

Bharath Vaibhav
ಭೂತರಾಮನಹಟ್ಟಿ ಕಿರುಮೃಗಾಲಯದಲ್ಲಿ 31 ಕೃಷ್ಣಮೃಗಗಳ ಪ್ರಕರಣಕ್ಕೆ ಟ್ವಿಸ್ಟ್
WhatsApp Group Join Now
Telegram Group Join Now

ಬೆಳಗಾವಿ : ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಬಳಿ ಇರುವ ರಾಣಿ ಚೆನ್ನಮ್ಮ ಕಿರುಮೃಗಾಲಯದಲ್ಲಿ 31 ಕೃಷ್ಣಮೃಗಗಳು ಸಾವನ್ನಪ್ಪಿರುವ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ.

ಮೂರು ತಿಂಗಳ ಹಿಂದೆಯೇ ರಾಷ್ಟ್ರೀಯ ಪಶು ವೈದ್ಯಕೀಯ ಸಾಂಕ್ರಾಮಿಕ ರೋಗಶಾಸ್ತ್ರ ಮತ್ತು ರೋಗ ಮಾಹಿತಿ ಸಂಸ್ಥೆಯಿಂದ ಮೃಗಾಲಯಕ್ಕೆ ಮುನ್ಸೂಚನೆ ನೀಡಲಾಗಿತ್ತು ಎಂದು ತಿಳಿದುಬಂದಿದೆ.

ಬೆಂಗಳೂರಿನ ಯಲಹಂಕದಲ್ಲಿರುವ ರಾಷ್ಟ್ರೀಯ ಪಶು ವೈದ್ಯಕೀಯ ಸಾಂಕ್ರಾಮಿಕ ರೋಗಶಾಸ್ತ್ರ ಮತ್ತು ರೋಗ ಮಾಹಿತಿ ಸಂಸ್ಥೆ ಅರಣ್ಯ ಇಲಾಖೆ ಹಾಗೂ ಮೃಗಾಲಯಗಳಿಗೆ ಮೂರು ತಿಂಗಳ ಹಿಂದೆ ಮೃಗಾಲಯಕ್ಕೆ ರೋಗ ಹರಡುವ ಕುರಿತು ಮಾಹಿತಿ ನೀಡಿತ್ತು.

ಅಲ್ಲದೆ ಹಸು ಎಮ್ಮೆ ಸಾಕುವ ರೈತರಿಗೂ ಈ ಸಂದೇಶ ರವಾನಿಸಲಾಗಿತ್ತು. ಅಲ್ಲದೇ ಬೆಳಗಾವಿ ಭಾಗದಲ್ಲಿ ಹಿಮೋರೆಜಿಕ್ ಸೆಪ್ಟಿಸಿಮೀಯಾ ಕಾಯಿಲೆ ಬಗ್ಗೆ ಎಚ್ಚರಿಕೆ ವಹಿಸುವಂತೆ ಮಾಹಿತಿ ನೀಡಲಾಗಿತ್ತು. ರಾಷ್ಟ್ರೀಯ ಸಂಸ್ಥೆಯಿಂದ ಮಾಹಿತಿ ನೀಡಿದ ನಂತರವೂ ಸಹ ಅರಣ್ಯ ಇಲಾಖೆ ನಿರ್ಲಕ್ಷ ವಹಿಸಿದೆ.

ಈಗಾಗಲೇ 31 ಕೃಷ್ಣಮೃಗಗಳು ಸಾವನ್ನಪ್ಪಿದ್ದು, 7 ಮಾತ್ರ ಬದುಕುಳಿದಿವೆ. ಹೀಗಾಗಿ ಅವುಗಳಿಗೆ ಆಂಟಿ ಬಯೋಟೆಕ್ ಚಿಕಿತ್ಸೆ ನೀಡುತ್ತಿದ್ದಾರೆ.

ಕೃಷ್ಣಮೃಗಗಳ ಸಾವಿಗೆ ಗಳಲೆ ರೋಗ ಕಾರಣ ಎಂಬ ಶಂಕೆ ವ್ಯಕ್ತವಾದ ಹಿನ್ನೆಲೆ ಸಿಬ್ಬಂದಿ ಮೃಗಾಲಯದ ಒಳಗಡೆ ಔಷಧಿ ಸಿಂಪಡಣೆ ಮಾಡಿ ಬ್ಯಾಕ್ಟೀರಿಯಾ ನಾಶ ಮಾಡುವ ಪ್ರಯತ್ನ ಮಾಡಿದ್ದಾರೆ.

ಗಳಲೆ ರೋಗ ಇತರೆ ಸಾಕು ಪ್ರಾಣಿಗಳಿಗಳಿಗೆ ಹರಡುವ ಭೀತಿ ಇರುವುದರಿಂದ ಸುತ್ತಮುತ್ತಲಿನ ಗ್ರಾಮಗಳಿಗೂ ಎಚ್ಚರಿಕೆ ಸಂದೇಶವನ್ನು ಕಳುಹಿಸಲಾಗಿದೆ.

ಇನ್ನು ಈ ವಿಚಾರವಾಗಿ ಸಚಿವ ಈಶ್ವರ ಖಂಡ್ರೆ ಪ್ರತಿಕ್ರಿಯೆ ನೀಡಿದ್ದು ಈಗಾಗಲೇ ಕೃಷ್ಣಮೃಗಗಳ ಸಾವಿನ ಕುರಿತು ಉನ್ನತ ಮಟ್ಟದ ತನಿಖೆ ನಡೆಯುತ್ತಿದ್ದು, ತನಿಖೆಯ ಬಳಿಕ ವರದಿ ಬರಲಿದೆ. ವರದಿಯಲ್ಲಿ ಅಕಸ್ಮಾತ್ ಲೋಪಗಳು ಏನಾದರೂ ಕಂಡುಬಂದರೆ ಕಠಿಣವಾದ ಕ್ರಮ ಕೈಗೊಳ್ಳಲಾಗುತ್ತದೆ..

ಈಗಾಗಲೇ 31 ಕೃಷ್ಣಮೃಗಗಳು ಸಾವನಪ್ಪಿದ್ದು, ಇನ್ನುಳಿದ 7 ಕೃಷ್ಣಮೃಗಗಳನ್ನು ಉಳಿಸಿಕೊಳ್ಳಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಬೆಂಗಳೂರಲ್ಲಿ ಸಚಿವ ಈಶ್ವರ ಖಂಡ್ರೆ ತಿಳಿಸಿದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!