Ad imageAd image

ಕಡಿದು ಬಿದ್ದ ಕೇಬಲ್ ವೈರ್‌ಗೆ ಸಿಲುಕಿ ಬೈಕ್ ಸವಾರರಿಬ್ಬರು ದುರಂತ ಸಾವು 

Bharath Vaibhav
ಕಡಿದು ಬಿದ್ದ ಕೇಬಲ್ ವೈರ್‌ಗೆ ಸಿಲುಕಿ ಬೈಕ್ ಸವಾರರಿಬ್ಬರು ದುರಂತ ಸಾವು 
WhatsApp Group Join Now
Telegram Group Join Now

ಹುಬ್ಬಳ್ಳಿ: ಕಡಿದು ಬಿದ್ದ ಕೇಬಲ್ ವೈರ್‌ಗೆ ಸಿಲುಕಿ ಬೈಕ್ ಸವಾರರಿಬ್ಬರು ಸಾವಿಗೀಡಾದಂತಹ ದುರಂತ ಘಟನೆ ಇಂದು ಮುಂಜಾನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಗೋಕುಲ್ ರಸ್ತೆಯಲ್ಲಿರೋ ಅರ್ಬನ್ ಓಯಾಸಿಸ್ ಮಾಲ್ ಬಳಿ ಈ ದುರಂತ ನಡೆದಿದೆ.

ಮೃತ ಬೈಕ್ ಸವಾರರಿಬ್ಬರು ತಮ್ಮ 20ರ ಹರೆಯದಲ್ಲಿದ್ದು, ಮೃತರನ್ನು 25 ವರ್ಷದ ಫಯಾಜ್ ಹಾಗೂ 27 ವರ್ಷದ ಮುಜಾಮಿಲ್ ಎಂದು ಗುರುತಿಸಲಾಗಿದೆ.

ಮೃತರು ಹುಬ್ಬಳ್ಳಿಯ ತಾಜ್ ನಗರದ ನಿವಾಸಿಗಳಾಗಿದ್ದಾರೆ. ರಸ್ತೆ ಮೇಲೆ ಕೇಬಲ್ ವೈರ್ ಕಡಿದು ಬಿದ್ದಿದ್ದರಿಂದ ಈ ದುರಂತ ಸಂಭವಿಸಿದೆ.

ಕೇಬಲ್ ವೈರ್‌ಗೆ ಸಿಲುಕಿ ಬೈಕ್ ನಿಯಂತ್ರಣ ಕಳೆದುಕೊಂಡು ರಸ್ತೆಗೆ ಉರುಳಿದ್ದರಿಂದ ಇಬ್ಬರು ರಸ್ತೆಗೆ ಬಿದ್ದು, ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.

ಈ ಬಗ್ಗೆ ಹುಬ್ಬಳ್ಳಿ ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಅಪಘಾತದಲ್ಲಿ ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!