Ad imageAd image

ಯಡಿಯೂರು ವಾರ್ಡ್ನಲ್ಲಿ ಡಾ.ಪುನೀತ್ ರಾಜ್ ಕುಮಾರ್ ಪುತ್ಥಳಿ ಅನಾವರಣ

Bharath Vaibhav
ಯಡಿಯೂರು ವಾರ್ಡ್ನಲ್ಲಿ ಡಾ.ಪುನೀತ್ ರಾಜ್ ಕುಮಾರ್ ಪುತ್ಥಳಿ ಅನಾವರಣ
WhatsApp Group Join Now
Telegram Group Join Now

ಬೆಂಗಳೂರು:– ಪದ್ಮಾನಾಭನಗರ ವಿಧಾನ ಸಭಾ ಕ್ಷೇತ್ರದ ಯಡಿಯೂರು ವಾರ್ಡಿನ ವ್ಯಾಪ್ತಿಗೆ ಬರುವ ಸೌತ್ ಎಂಡ್ ವೃತ್ತದಲ್ಲಿ “ಕರ್ನಾಟಕ ರತ್ನ ಡಾ. ಪುನೀತ್ ರಾಜ್ ಕುಮಾರ್” ರವರ ಆರು ಅಡಿ ಎತ್ತರದ ಕಂಚಿನ ಪುತ್ಥಳಿಯನ್ನು ಲೋಕಾರ್ಪಣೆ ಗೊಳಿಸಲಾಯಿತ್ತು.

ಪದ್ಮಾನಾಭ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಅಶ್ವಿನಿ ಪುನೀತ್ ರಾಜ್ ಕುಮಾರ್, ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್.ಆರ್.ರಮೇಶ್ ಹಾಗೂ ಬಿಬಿಎಂಪಿ ಮಾಜಿ ಸದಸ್ಯರಾದ ಎಂ.ಹೆಚ್.ಬಸವರಾಜ್, ಪುಷ್ಪಾರ್ಚನೆ ಮಾಡುವ ಮೂಲಕ ಹಾಗೂ ಪಾರಿವಾಳಗಳನ್ನು ಹಾರಿ ಬಿಡುವ ಮೂಲಕ ಲೋಕಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ನೂರಾರು ದೊಡ್ಮನೆ ಕುಟುಂಬದ ಅಭಿಮಾನಿಗಳು ಉಪಸ್ಥಿತರಿದ್ದರು.

ಎನ್.ಆರ್.ರಮೇಶ್ ಅವರು ಡಾ. ರಾಜ್ ಕುಮಾರ್, ಪುನೀತ್ ರಾಜ್ ಕುಮಾರ್,ಪಾವರ್ತಮ್ಮ ರಾಜ್ ಕುಮಾರ್ ಅವರ ಕುಟುಂಬದ ಅಪ್ಪಟ ಅಭಿಮಾನಿಯಾಗಿದ್ದು. ಪುನೀತ್ ಪುತ್ಥಳಿ ಅನಾವರಣದಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

ವರದಿಗಾ:-ಅಯ್ಯಣ್ಣ ಮಾಸ್ಟರ್

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!