Ad imageAd image

ಜಕ್ಕನಾಯಕನಕೊಪ್ಪ ಗ್ರಾಮದ ವಾಲ್ಮೀಕಿ ನಗರಕ್ಕೆ ರಸ್ತೆ ಮತ್ತು ಚರಂಡಿ ನಿರ್ಮಾಣ ಮಾಡದ ಭಾವಿಹಾಳ ಗ್ರಾ.ಪಂ ಆಡಳಿತ.

Bharath Vaibhav
ಜಕ್ಕನಾಯಕನಕೊಪ್ಪ ಗ್ರಾಮದ ವಾಲ್ಮೀಕಿ ನಗರಕ್ಕೆ ರಸ್ತೆ ಮತ್ತು ಚರಂಡಿ ನಿರ್ಮಾಣ ಮಾಡದ ಭಾವಿಹಾಳ ಗ್ರಾ.ಪಂ ಆಡಳಿತ.
WhatsApp Group Join Now
Telegram Group Join Now

ಬೈಲಹೊಂಗಲ: ಬೆಳಗಾವಿ ಜಿಲ್ಲೆಯ ಕಿತ್ತೂರು ವಿಧಾನಸಭಾ ಕ್ಷೇತ್ರದ ಬೈಲಹೊಂಗಲ ತಾಲ್ಲೂಕಿನ ಭಾವಿಹಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಕ್ಕನಾಯಕನಕೊಪ್ಪ ಗ್ರಾಮದ ವಾಲ್ಮೀಕಿ ನಗರದಲ್ಲಿ ವಾಸಿಸುತ್ತಿರುವ ಹಿಂದುಳಿದ ವರ್ಗದವರು ವಾಸಿಸುತ್ತಿರುವ ಈ ವಾಲ್ಮೀಕಿ ನಗರಕ್ಕೆ ಸಮರ್ಪಕವಾಗಿ ರಸ್ತೆ ಹಾಗೂ ಚರಂಡಿ ವ್ಯವಸ್ಥೆಯಿಲ್ಲದೇ ಇರುವ ಕಾರಣ ತುಂಬಾ ತೊಂದರೆಯಾಗುತ್ತಿದೆ. ಇನ್ನೂ ಮಳೆಗಾಲದಲ್ಲಂತೂ ಇಳಿಜಾರು ಪ್ರದೇಶವಾಗಿರುವುದರಿಂದ ಮಣ್ಣಿನ ನೀರು ತಗ್ಗು ಪ್ರದೇಶಗಳಲ್ಲಿರುವ ಮನೆಗಳಿಗೆ ಹೋಗಿ ಸಾಕಷ್ಟು ಸಮಸ್ಯೆಯಾಗುತ್ತಿದೆ.

ಇನ್ನೂ ಈ ಸಮಸ್ಯೆ ಬಗೆಹರಿಸುವಂತೆ ಪದೇ ಪದೇ ಗ್ರಾ.ಪಂ ಪಿ.ಡಿ.ಓ ಹಾಗೂ ಅಧ್ಯಕ್ಷರು ಹಾಗೂ ಸದಸ್ಯರಿಗೆ ಗಮನಕ್ಕೆ ತೆಗೆದುಕೊಂಡು ಬಂದರೂ ಸಹ ಯಾವುದೇ ರೀತಿಯ ಪ್ರಯೋಜನವಾಗಿಲ್ಲ. ಆದ್ದರಿಂದ ಇವರ ಮನವಿ ಮೇರೆಗೆ ನಮ್ಮ ನ್ಯೂಸ್ ಸಮೂಹದ ರಾಜ್ಯ ಉಪ ಸಂಪಾದಕ ಬಸವರಾಜು ಈ ಸ್ಥಳಕ್ಕೆ ಭೇಟಿಕೊಟ್ಟು ವರದಿ ತಯಾರಿಸಿ ಬೈಲಹೊಂಗಲ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಆದ ಮಹೇಶ್ ಹೂಲಿ ಅವರ ಗಮನಕ್ಕೆ ತೆಗೆದುಕೊಂಡು ಬಂದು ಬೆಳಕು ಚೆಲ್ಲುವ ಕೆಲಸ ಮಾಡಿದ್ದಾರೆ. ಇನ್ನಾದರೂ ಈ ವಾಲ್ಮೀಕಿನಗರಕ್ಕೆ ರಸ್ತೆ ಮತ್ತು ಚರಂಡಿ ಬಾಗ್ಯ ಸಿಗುವುದೇ ಎಂಬುದನ್ನು ಕಾದುನೋಡಬೇಕಿದೆ.

ವರದಿ: ಬಸವರಾಜು

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!