ನವದೆಹಲಿ: ಉಪರಾಷ್ಟ್ರಪತಿ ಮತ್ತು ರಾಜ್ಯಸಭೆಯ ಸಭಾಪತಿ ಜಗದೀಪ್ ಧನಕರ್ ಅವರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬುಧವಾರ ಬಿಡುಗಡೆಯಾಗಿದ್ದಾರೆ.
ಎದೆ ನೋವು ಕಾಣಿಸಿಕೊಂಡ ಕಾರಣ ಮಾರ್ಚ್ 9ರಂದು ಧನಕರ್ ಅವರನ್ನು ದೆಹಲಿಯ ಏಮ್ಸ್ಗೆ ದಾಖಲಿಸಲಾಗಿತ್ತು. ವೈದ್ಯರ ತಂಡ ಉಪರಾಷ್ಟ್ರಪತಿ ಧನಕರ್ ಅವರನ್ನು ಕಾಳಜಿಯಿಂದ ನೋಡಿಕೊಂಡಿದೆ.
ಅವರು ಉತ್ತಮ ರೀತಿಯಲ್ಲಿ ಚೇತರಿಸಿಕೊಂಡ ಕಾರಣ ಆಸ್ಪತ್ರೆಯಿಂದ ಡಿಸ್ಮಾರ್ಟ್ ಮಾಡಲಾಗಿದೆ.
ಮುಂದಿನ ಕೆಲವು ದಿನ ವಿಶ್ರಾಂತಿಗೆ ಸೂಚಿಸಲಾಗಿದೆ ಎಂದು ದೆಹಲಿಯ ಏಮ್ಸ್ ತಿಳಿಸಿದೆ. ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಧನಕರ್, ಏಮ್ಸ್ ವೈದ್ಯರ ತಂಡಕ್ಕೆ ಧನ್ಯವಾದ ತಿಳಿಸಿದ್ದಾರೆ.




