Ad imageAd image

ಪರಪ್ಪನ ಅಗ್ರಹಾರ ಜೈಲು ಸೇರಿದ ಶಾಸಕ ವಿನಯ್ ಕುಲಕರ್ಣಿ 

Bharath Vaibhav
ಪರಪ್ಪನ ಅಗ್ರಹಾರ ಜೈಲು ಸೇರಿದ ಶಾಸಕ ವಿನಯ್ ಕುಲಕರ್ಣಿ 
vinay kulkarni
WhatsApp Group Join Now
Telegram Group Join Now

ಬೆಂಗಳೂರು/ಧಾರವಾಡ : ಯೋಗೇಶ್‌ ಗೌಡ ಕೊಲೆ ಪ್ರಕರಣದ ಆರೋಪಿ, ಧಾರವಾಡ ಶಾಸಕ ವಿನಯ್​ ಕುಲಕರ್ಣಿ ಜಾಮೀನು ರದ್ದಾಗಿದೆ. ಆದ್ದರಿಂದ ಕೋರ್ಟ್ ಆದೇಶದಂತೆ ಇಂದು ವಿನಯ್ ಕುಲಕರ್ಣಿಯವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಕೋರ್ಟ್ ವಚಾರಣೆ ಮುಗಿದ ಬಳಿಕ ಶಾಸಕ ವಿನಯ್ ಕುಲಕರ್ಣಿಯವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗುವುದು.

ಇತ್ತೀಚೆಗೆ ಸುಪ್ರೀಂ ಕೋರ್ಟ್ ವಿನಯ್​ ಕುಲಕರ್ಣಿಯ ಜಾಮೀನನ್ನು ರದ್ದುಪಡಿಸಿತು. ಒಂದು ವಾರದೊಳಗೆ ನ್ಯಾಯಾಲಯಕ್ಕೆ ಶರಣಾಗುವಂತೆ ಸೂಚಿಸಿತ್ತು

ವಿನಯ್ ಕುಲಕರ್ಣಿ ಬೆಂಬಲಿಗರು ಸಿಟಿ ಸಿವಿಲ್ ಕೋರ್ಟ್ ಮುಂಭಾಗ ಜಮಾಯಿಸಿದ್ರು. ಪರಪ್ಪನ ಅಗ್ರಹಾರ ಜೈಲಿಗೆ ವಿನಯ್ ಕುಲಕರ್ಣಿಯನ್ನ ಸಿಬಿಐ ಅಧಿಕಾರಿಗಳು ಕರೆದೊಯ್ದಿದ್ದಾರೆ. ಈ ವೇಳೆ ತಮ್ಮ ನಾಯಕ ಜೈಲು ಸೇರುತ್ತಿರೋದನ್ನ ಕಂಡು ಕೋರ್ಟ್ ಮುಂಭಾಗ ಬೆಂಬಲಿಗರು ಕಣ್ಣೀರು ಹಾಕಿದ್ದಾರೆ.

 

WhatsApp Group Join Now
Telegram Group Join Now
Share This Article
error: Content is protected !!