Ad imageAd image

ಪ್ರೇಮಿಗಳ ದಿನಾಚರಣೆ : ಕತ್ತೆಗಳ ಮದುವೆ ಮಾಡಿಸಿ ವಾಟಾಳ್ ನಾಗರಾಜ್ ಪ್ರತಿಭಟನೆ 

Bharath Vaibhav
ಪ್ರೇಮಿಗಳ ದಿನಾಚರಣೆ : ಕತ್ತೆಗಳ ಮದುವೆ ಮಾಡಿಸಿ ವಾಟಾಳ್ ನಾಗರಾಜ್ ಪ್ರತಿಭಟನೆ 
WhatsApp Group Join Now
Telegram Group Join Now

ಬೆಂಗಳೂರು: ಫೆಬ್ರವರಿ 14 ಇಂದು ಪ್ರೇಮಿಗಳ ದಿನಾಚರಣೆ. ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಪ್ರತಿ ವರ್ಷದಂತೆ ಈ ವರ್ಷವೂ ಕತ್ತೆಗಳಿಗೆ ಮದುವೆ ಮಾಡಿಸುವ ಮೂಲಕ ವಿಶಿಷ್ಟವಾಗಿ ಆಚರಿಸಿದ್ದಾರೆ.

ಬೆಂಗಳೂರು ನಗರದ ಸೆಂಟ್ರಲ್ ರೈಲ್ವೆ ನಿಲ್ದಾಣದ ಬಳಿ ಕತ್ತೆಗಳ ಮೆರವಣಿಗೆ ನಡೆಸಿದರು.ಬಳಿಕ ಎರಡು ಕತ್ತೆಗಳಿಗೆ ಪೂಜೆ ಸಲ್ಲಿಸಿ, ಸಾಂಪ್ರದಾಯಿಕವಾಗಿ ಹೂವಿನ ಹಾರ ಹಾಕಿ ತಾಳಿ ಕಟ್ಟಿ ಮದುವೆ ಮಾಡಲಾಗಿದೆ.

ಮದುವೆಯ ಶಾಸ್ತ್ರಗಳು ನಡೆಯುತ್ತಿದ್ದಾಗಲೇ ಗಂಡು ಕತ್ತೆ ಹಠಾತ್ತನೆ ಅಲ್ಲಿಂದ ಓಡಿಹೋಗಿದೆ. ಇದನ್ನು ಕಂಡು ನೆರೆದಿದ್ದ ಸಾರ್ವಜನಿಕರು ನಗೆಗಡಲಲ್ಲಿ ತೇಲಿದ್ದಾರೆ. ನಂತರ ಕತ್ತೆಯನ್ನು ಹಿಡಿದು ತಂದು ಮದುವೆ ಪ್ರಕ್ರಿಯೆ ಪೂರ್ಣಗೊಳಿಸಲಾಯಿತು.

ಈ ವೇಳೆ ಮಾತನಾಡಿದ ವಾಟಾಳ್ ನಾಗರಾಜ್, ಪ್ರೇಮ ಎನ್ನುವುದು ಕೇವಲ ಮನುಷ್ಯರಿಗಷ್ಟೇ ಸೀಮಿತವಲ್ಲ, ಅದು ಪ್ರಾಣಿ-ಪಕ್ಷಿಗಳಿಗೂ ಇದೆ.

ಕತ್ತೆ ಬಹಳ ಪವಿತ್ರವಾದ ಪ್ರಾಣಿ, ಪುರಾಣಗಳಲ್ಲೂ ಕತ್ತೆಯ ಉಲ್ಲೇಖಗಳಿವೆ ಎಂದು ಹೇಳಿದ್ದಾರೆ. ಪ್ರೇಮ ವಿವಾಹವಾಗುವವರಿಗೆ ಸರ್ಕಾರ 3 ಲಕ್ಷ ರೂಪಾಯಿ ಪ್ರೋತ್ಸಾಹಧನ ನೀಡಬೇಕು ಮತ್ತು ಅವರಿಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!