
ಬೈಲಹೊಂಗಲ: ಇ ಎಲ್ ಸಿ ಕ್ಲಬ್ ಎನ್ ಎಸ್ ಎಸ್ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು, ಬೈಲಹೊಂಗಲ ಸಮೀಪದ ಶ್ರೀ ಶಿವಯೋಗಿಶ್ವರ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯ ಇಂಚಲ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಇ ಎಲ್ ಸಿ ಕ್ಲಬ್ ಎನ್ ಎಸ್ ಎಸ್ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು, ಈ ಕಾರ್ಯಕ್ರಮದ ದಿವ್ಯ ಸಾನಿಧ್ಯ ಶ್ರೀ ಪೂರ್ಣಾನಂದ ಭಾರತಿ ಸ್ವಾಮೀಜಿಯವರು ವಹಿಸಿಕೊಂಡಿದ್ದರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಶಿವಾನಂದ ಭಾರತಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಎಸ್ ಎನ್ ಕೊಳ್ಳಿ ಗುರುಗಳು ವಹಿಸಿಕೊಂಡಿದ್ದರು, ಮುಖ್ಯ ಅಥಿತಿಗಳಾಗಿ ಕೆ ವಿ ಜಿ ಬಿ ವ್ಯವಸ್ಥಾಪಕರಾದ ಬಸವರಾಜ ಜಗದಾಳೆ ಅವರು ಆಗಮಿಸಿದ್ದರು, ಹಾಗೂ ಬಿ ಎಸ್ ಮಲ್ಲೂರ ಅವರು ಆಗಮಿಸಿದ್ದರು, ಕಾರ್ಯಕ್ರಮದಲ್ಲಿ ಪ್ರಾಚಾರ್ಯರಾದ ಶ್ರೀ ಎಸ್ ಟಿ ಕಾಂಬಳೆ ಅವರು ಉಪಸ್ಥಿತರಿದ್ದರು, ಕಾಲೇಜಿನ ಎಲ್ಲ ಉಪನ್ಯಾಸಕ ವರ್ಗದವರು ಭಾಗವಹಿಸಿದ್ದರು, ಎಲ್ಲ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ವರದಿ : ದುಂಡಪ್ಪ ಹೂಲಿ




