Ad imageAd image
- Advertisement -  - Advertisement -  - Advertisement - 

ಗ್ಯಾರಂಟಿ ಹಣಕ್ಕಾಗಿ ಕಾಂಗ್ರೆಸ್ ಕಚೇರಿ ಮುಂದೆ ಕ್ಯೂ ನಿಂತ ಮಹಿಳೆಯರು 

Bharath Vaibhav
ಗ್ಯಾರಂಟಿ ಹಣಕ್ಕಾಗಿ ಕಾಂಗ್ರೆಸ್ ಕಚೇರಿ ಮುಂದೆ ಕ್ಯೂ ನಿಂತ ಮಹಿಳೆಯರು 
WhatsApp Group Join Now
Telegram Group Join Now

ಲಕ್ನೋ: ನಾವು ಗೆದ್ದರೆ ಮರುದಿನವೇ ನಿಮ್ಮ ಖಾತೆಗೆ ಹಣ ಹಾಕುವುದಾಗಿ ಕಾಂಗ್ರೆಸ್‌ ನಾಯಕರು ಪ್ರಚಾರ ಮಾಡಿದ ಹಿನ್ನೆಲೆಯಲ್ಲಿ ಇಂದು ಲಕ್ನೋ ಕಾಂಗ್ರೆಸ್‌ ಕಚೇರಿಗೆ ಭಾರೀ ಸಂಖ್ಯೆಯಲ್ಲಿ ಮುಸ್ಲಿಂ ಮಹಿಳೆಯರು ಆಗಮಿಸಿದ್ದರು.

ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್‌ ಗೆದ್ದರೇ ಮರುದಿನವೇ ನಿಮ್ಮ ಖಾತೆಗೆ ಹಣ ಹಾಕುತ್ತೇವೆ ಎಂದಿತ್ತು. ಈ ಹಿನ್ನೆಲೆಯಲ್ಲಿ ಕೈಯಲ್ಲಿ ಗ್ಯಾರಂಟಿ ಕಾರ್ಡ್‌ ಹಿಡಿದು ಬಂದ ಅವರು ಕಾಂಗ್ರೆಸ್‌ ಗೆದ್ದರೆ ಹಣ ಹಾಕುವುದಾಗಿ ತಿಳಿಸಿದ್ದರು.

ಹೀಗಾಗಿ ಗ್ಯಾರಂಟಿ ಕಾರ್ಡ್‌ ಹಿಡಿದುಕೊಂಡು ಬಂದಿದ್ದೇವೆ ಎಂದರೆ, ಕೆಲವರು ಈ ಹಿಂದೆಯೇ ನಾವು ಖಾತೆ ವಿವರ ನೀಡಿ ಫಾರಂ ಭರ್ತಿ ಮಾಡಿದ್ದೇವೆ. ಕಾಂಗ್ರೆಸ್‌ ಕಚೇರಿಯಿಂದ ನಮಗೆ ಸ್ವೀಕೃತಿ ರಸೀದಿ ಸಿಕ್ಕಿದೆ. ಗೆದ್ದ ನಂತರ ಕಚೇರಿಗೆ ಬಂದರೆ ದುಡ್ಡು ನೀಡುವುದಾಗಿ ತಿಳಿಸಿದ್ದರು. ಹೀಗಾಗಿ ನಾವು ಬಂದಿದ್ದೇವೆ ಎಂದು ಹೇಳಿದರು.

ಕರ್ನಾಟಕದಲ್ಲಿ ಹೇಗೆ ಕಾಂಗ್ರೆಸ್‌ ಮನೆ ಮನೆಗೆ ಗ್ಯಾರಂಟಿ ಕಾರ್ಡ್‌ಗಳನ್ನು ಹೇಗೆ ಹಂಚಿಕೆ ಮಾಡಿತ್ತೋ ಅದೇ ರೀತಿಯಾಗಿ ಉತ್ತರ ಪ್ರದೇಶದಲ್ಲೂ ಕಾಂಗ್ರೆಸ್‌, ಎಸ್‌ಪಿ ಕಾರ್ಯಕರ್ತರು ಪ್ರತಿ ಮನೆ ಮನೆಗೆ ಗ್ಯಾರಂಟಿ ಕಾರ್ಡ್‌ ಹಂಚಿಕೆ ಮಾಡಿದ್ದರು. ಮಹಾಲಕ್ಷ್ಮಿ ಯೋಜನೆಯ ಅಡಿಯಲ್ಲಿ ಪ್ರತಿ ಕುಟುಂಬಕ್ಕೆ 1 ಲಕ್ಷ ರೂ. ತಿಂಗಳಿಗೆ 8,500 ರೂ. ನೀಡುವುದಾಗಿ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿತ್ತು.

 

WhatsApp Group Join Now
Telegram Group Join Now
Share This Article
error: Content is protected !!