Ad imageAd image

ಐಪಿಎಲ್ ಬೆಟ್ಟಿಂಗ್ ನಲ್ಲಿ ಹಣ ಕಳೆದುಕೊಂಡು ಯುವಕ ಆತ್ಮಹತ್ಯೆ 

Bharath Vaibhav
WhatsApp Group Join Now
Telegram Group Join Now

ರಾಯಚೂರು: ಐಪಿಎಲ್ ಬೆಟ್ಟಿಂಗ್ ನಲ್ಲಿ ಹಣ ಕಳೆದುಕೊಂಡ ಯುವಕ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ನಡೆದಿದೆ.

ಮುದಿಬಸವ (24) ಮೃತ ಯುವಕ. ಲಾಡ್ಜ್ ರೂಮಿನಲ್ಲಿಯೇ ಯುವಕ ನೇಣಿಗೆ ಶರಣಾಗಿದ್ದಾನೆ. ಮಸ್ಕಿ ತಾಲೂಕಿನ ಉದ್ಬಾಳ ಗ್ರಾಮದ ಮುದಿಬಸವ ಬೆಟ್ಟಿಂಗ್ ನಿಂದ ಹೆಚ್ಚು ಹಣ ಮಾಡಬಹುದು ಎಂದುಕೊಂಡಿದ್ದ.

ಆದರೆ ಬೆಟ್ಟಿಂಗ್ ನಲ್ಲಿ ಲಕ್ಷಾಂತರ ಹಣ ಕಳೆದುಕೊಂಡಿದ್ದಾನೆ. ಮನನೊಂದ ಯುವಕ ಸಿಂಧನೂರಿನ ಸಾಯಿ ರೆಸಿಡೆನ್ಸಿ ಲಾಡ್ಜ್ ರೂಮಿನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬೆಳಿಗ್ಗೆ ಎಷ್ಟು ಹೊತ್ತಾದರೂ ಯುವಕ ರೂಮಿನಿಂದ ಹೊರಬಂದಿಲ್ಲ. ಅನುಮಾನಗೊಂಡು ಲಾಡ್ಜ್ ಸಿಬ್ಬಂದಿಗಳು ಪರುಶೀಲಿಸಿದಾಗ ಯುವಕ ಮುದಿಬಸವ ರೂಮಿನ ಫ್ಯಾನ್ ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ.

ಸಿಂಧನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!